ಮನೆ Latest News ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಇಂದು ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ಮೌಲ್ಯಮಾಪನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಇಂದು ಸೂರಜ್ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ಮೌಲ್ಯಮಾಪನ

0

ಬೆಂಗಳೂರು: ಚನ್ನರಾಯಪಟ್ಟಣ ತಾಲ್ಲೂಕಿನ ಗನ್ನಿಗಡ ತೋಟದ ಮನೆಯಲ್ಲಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಅರೆಸ್ಟ್ ಆಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸದ್ಯ ಸಿಐಡಿ ಕಸ್ಟಡಿಯಲ್ಲಿದ್ದಾರೆ. ಅವರನ್ನು ಇಂದು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ಮೌಲ್ಯಮಾಪನಕ್ಕೆ ಒಳಪಡಿಸಲಾಗುತ್ತದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಮೂತ್ರಶಾಸ್ತ್ರಜ್ಞರು, ವಿಧಿವಿಜ್ಞಾನ ತಜ್ಞರು ಮತ್ತು ವೈದ್ಯರು ಪರೀಕ್ಷೆ ಒಳಪಡಿಸಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸೂರಜ್ ರೇವಣ್ಣ ಅವರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತನನ್ನು ಈಗಾಗಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆತನನ್ನು 15 ರೀತಿಯ ಪರೀಕ್ಷೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. ಇನ್ನು ಸೂರಜ್ ರೇವಣ್ಣ ಅವರಿಗೆ 8 ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎನ್ನಲಾಗುತ್ತಿದೆ. ಸಾಮರ್ಥ್ಯ ಪರೀಕ್ಷೆ, ಮೂತ್ರಪಿಂಡ ಮತ್ತು ವೃಷಣ ಪರೀಕ್ಷೆಗಳು ಮತ್ತು ಲೈಂಗಿಕ ಸಾಮರ್ಥ್ಯದ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಸೂರಜ್ ಬಟ್ಟೆ, ಬಳಸಿದ ಇತರೆ ವಸ್ತುಗಳು ಕೂದಲು, ಉಗುರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಿದ್ದಾರೆ.

ಏನಿದು ಪ್ರಕರಣ?

ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಎಫ್ ಐ ಆರ್ ದಾಖಲಿಸಿದ್ದರು. ಪೊಲೀಸ್  ಮಹಾ ನಿರ್ದೇಶಕರು, ಗೃಹಸಚಿವರಿಗೂ ದೂರು ಸಲ್ಲಿಸಿದ್ದಾರೆ.ಇದರ ಬೆನ್ನಲ್ಲೇ ಸೂರಜ್ ಆಪ್ತ ದೂರದಾರನೇ ವಿರುದ್ಧವೇ ದೂರು ದಾಖಲಿಸಿದ್ದರು.

ಡಾ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ರಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಮಾಡಿರೊದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ್ದಾರೆ. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ.ನೀನೇ ಹೋಗಿ ಬಾಸ್ ಅನ್ನು ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ . ಹಾಗೇ ಹೋದವನು ವಾಪಾಸ್ ಬಂದು ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ಶಿವಕುಮಾರ್ ದೂರು ಕೊಟ್ಟಿದ್ದಾರೆ.

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ.ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು.ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು.ನಾನೇನು ತಪ್ಪು ಮಾಡಿಲ್ಲ,ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪ ಮಾಡಿದ್ದಾರೆ.

ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಐದು ಕೋಟಿ ಬಳಿಕ ಮೂರು ಕೋಟಿ ,ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ ಎಂದಿದ್ದಾರೆ.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಿದ್ದಾರೆ.