ಮನೆ Latest News ತನ್ನ ವಿರುದ್ಧ ದೂರು ನೀಡಿದ ಮಹಿಳೆ ನನಗೆ ತುಂಬಾ ಪರಿಚಿತೆ; ವಿಚಾರಣೆ ವೇಳೆ ಶಾಸಕ ಮುನಿರತ್ನ...

ತನ್ನ ವಿರುದ್ಧ ದೂರು ನೀಡಿದ ಮಹಿಳೆ ನನಗೆ ತುಂಬಾ ಪರಿಚಿತೆ; ವಿಚಾರಣೆ ವೇಳೆ ಶಾಸಕ ಮುನಿರತ್ನ ಸ್ಫೋಟಕ ಹೇಳಿಕೆ

0

ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಮನಗರದ ಕಗ್ಗಲೀಪುರ ಪೊಲೀಸರಿಂದ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಹಾಗಾಗಿ ಮತ್ತೆ ಮುನಿರತ್ನ ಜೈಲು ಹಕ್ಕಿಯಾಗಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮನ್ನು ವಿಚಾರಣೆ ನಡೆಸುವ ವೇಳೆ ಶಾಸಕ ಮುನಿರತ್ನ ಹಲವು ಸ್ಫೋಟಕ ಮಾಹಿತಿಯನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಶಾಸಕ ಮುನಿರತ್ನ ಅವರು ಹನಿಟ್ರ್ಯಾಪ್ ಗಾಗಿ ಹೆಚ್ ಐವಿ ಸೋಂಕಿತರನ್ನು ಬಳಸಿಕೊಳ್ಳುತ್ತಿದ್ದರು ಎಂದು ಮಹಿಳೆ ಮುನಿರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಮುನಿರತ್ನ ತನಿಖೆ ವೇಳೆ ಉತ್ತರ ಕೊಟ್ಟಿದ್ದಾರೆ.

ದೂರು ಕೊಟ್ಟ ಮಹಿಳೆ ನನಗೆ ತುಂಬಾ ಚೆನ್ನಾಗಿ ಪರಿಚಯ. ಹನಿಟ್ರ್ಯಾಪ್ ಮಾಡೋದೆ ಆಕೆಯ ಕಾಯಕ. ನನಗೂ ಆಕೆಯೇ ನಿಮಗೆ ಯಾರ ವೀಡಿಯೋ ಬೇಕು, ನಿಮ್ಮ ಶತ್ರುಗಳು ಯಾರಿದ್ದಾರೆ ಅವರ ವೀಡಿಯೋ ಮಾಡಿ ಕೊಡುತ್ತೇನೆ ಎಂದು ಆಫರ್ ಕೊಟ್ಟಿದ್ದಳು ಎಂದು ಮುನಿರತ್ನ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ನನಗೆ ಆಗಾಗ್ಗೆ ಇಂತಹ ವೀಡಿಯೋಗಳನ್ನು ತಂದು ತೋರಿಸುತ್ತಿದ್ದಳು ಎಂದು ಮುನಿರತ್ನ ಹೇಳಿದ್ದಾರೆ.  ಆದರೆ ನಾನು ಆಕೆಯಿಂದ ಯಾವುದೇ ಹನಿಟ್ರ್ಯಾಪ್ ವೀಡಿಯೋಗಳನ್ನು ಮಾಡಿಸಿಲ್ಲ. ಆಕೆ ನನ್ನ ಮೇಲೆ ಮಾಡಿರುವ ಆರೋಪಗಳು ಎಲ್ಲಾ ಸುಳ್ಳು ಎಂದು ಶಾಸಕ ಮುನಿರತ್ನ ಅವರು ಹೇಳಿದ್ದಾರೆ.

ಮುನಿರತ್ನ ವಿರುದ್ಧದ ಪ್ರಕರಣಗಳನ್ನು ಎಸ್ ಐಟಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ  ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಎಸ್ ಐಟಿಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಜಾಮೀನು ಸಿಕ್ಕಿ ಹೊರಗಡೆ ಬಂದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ; ಜಾಮೀನು ಅರ್ಜಿ ಮುಂದೂಡಿಕೆಯಾಗಿ ಜೈಲು ಹಕ್ಕಿಯಾದ ಶಾಸಕ

ಬೆಂಗಳೂರು : ನಿನ್ನೆ ಗುತ್ತಿಗೆದಾರನಿಗೆ ಬೆದರೆಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಮುನಿರತ್ನಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಜೈಲಿನಿಂದ ಹೊರ ಬರುತ್ತಿದ್ದಂತೆ ಮಹಿಳೆಯೊಬ್ಬರು ದಾಖಲಿಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನು ತಮ್ಮ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಮುನಿರತ್ನ ಅವರ ಜಾಮೀನು ಅರ್ಜಿ ವಿಚಾರಣೆಯನ್ನು  ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಹಾಗಾಗಿ ಜೈಲಿನಿಂದ ಹೊರ ಬಂದೆ ಅಂತಾ ಕೊಂಚ ಸಮಾಧಾನದಲ್ಲಿದ್ದ ಮುನಿರತ್ನ ಅವರು ಇದೀಗ ಮತ್ತೆ ಜೈಲು ಸೇರುವಂತಾಗಿದೆ.

ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯಲ್ಲಿ ಸುಮಾರು 40 ವರ್ಷದ ಮಹಿಳೆಯೊಬ್ಬರು  2020 ರಿಂದ 2022ರವರೆಗೆ ಶಾಸಕ ಮುನಿರತ್ನ ಅವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೇ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆ ದೂರು ದಾಖಲಿಸಿದ್ದರು. ಆ ದೂರಿನಂತೆ  ಇಂದು ಪೋಲೀಸರು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.