ಮನೆ Videos ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

0

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ಭೇಟಿ ನೀಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಂತೋಷ್ ಜೀ ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಜೀವನ – ಸಾಧನೆ ಕುರಿತ Furrows in a Field: The Unexplored Life of H.D. Deve Gowda (ಕನ್ನಡಲ್ಲಿ: ನೇಗಿಲ ಗೆರೆಗಳು) ಗ್ರಂಥವನ್ನು ನೀಡಿ ಆಶೀರ್ವಾದ ಪಡೆದುಕೊಂಡ ನಿಖಿಲ್ ಅವರು; ಉಪ ಚುನಾವಣೆ, ಆ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರ ಗಮನಕ್ಕೆ ಹಲವು ಅಂಶಗಳನ್ನು ತಂದರು.ಅಲ್ಲದೆ; ಚನ್ನಪಟ್ಟಣ ಚುನಾವಣೆಯ ಬಗ್ಗೆ ಸಂತೋಷ್ ಜೀ ಅವರು ಕೆಲ ಮಾಹಿತಿಗಳನ್ನು ನಿಖಿಲ್ ಅವರಿಂದ ಪಡೆದುಕೊಂಡರು ಹಾಗೂ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ನಿಖಿಲ್ ಅವರಿಗೆ ಮಹತ್ವದ ಸಲಹೆ ಸೂಚನೆ ಮಾರ್ಗದರ್ಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು; ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು. ನನ್ನ ರಾಜಕೀಯ ಬೆಳವಣಿಗೆ ಹಾಗೂ ರಾಜ್ಯದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು ಎಂಬುದಾಗಿ ತಿಳಿಸಿದ್ದಾರೆ.