ಮನೆ Latest News ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಭೂಮಿ ಮಂಜೂರು ವಿಚಾರ; ನಾವು ಕಾನೂನು ಪ್ರಕಾರ...

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ಗೆ KIADB ಭೂಮಿ ಮಂಜೂರು ವಿಚಾರ; ನಾವು ಕಾನೂನು ಪ್ರಕಾರ ಜಮೀನು ತಗೋಬಾರದಾ? ಎಂದ ಪ್ರಿಯಾಂಕ ಖರ್ಗೆ

0

ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ಗೆ KIDB ಭೂಮಿ ಮಂಜೂರು ಆರೋಪಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯಿಸಿದ್ದಾರೆ.ಆಯಕಟ್ಟಿನ ಜಾಗದಲ್ಲಿ ನಾನಿದೀನಿ, ಅದಕ್ಕೆ ತಗೊಂಡಿದ್ದಾರೆ ಅಂತ ಆರೋಪಿಸಿದ್ದಾರೆ. ಹಾಗಾದ್ರೆ ನಾವು ಕಾನೂನು ಪ್ರಕಾರ ಜಮೀನು ತಗೋಬಾರದಾ?ನಮಗೆ ಅರ್ಹತೆ ಇಲ್ಲವಾ? ರಿಯಾಯತಿ ಕೇಳಿದೀವಿ, ಕುರ್ಚಿ ದುರ್ಬಳಕೆ ಮಾಡಿದ್ರೆ ಹೇಳಲಿ, ಅಂಥದ್ದೇನಾದ್ರೂ ಇದೆಯಾ?ಛಲವಾದಿಗೆ ಇಂಗ್ಲೀಷೂ ಬರಲ್ಲ, ಕಾನೂನು ಗೊತ್ತಿಲ್ಲ, ಸಿಎ ನಿವೇಶನಗಳ ಬಗ್ಗೆ ತಿಳಿದುಕೊಳ್ಳಲಿ ಅವರು.ನಮ್ಮಣ್ಣ ರಾಹುಲ್ ಖರ್ಗೆಯವರ ಬಗ್ಗೆ ಛಲವಾದಿಯವರಿಗೆ ಏನು ಗೊತ್ತಿದೆ?ಅವರಿಗೆ ಯುವಿಯಲ್ಲಿ ಟಾಪ್ ಬಂದವರು, ಐಐಎಸ್‌ಸಿ ಯಲ್ಲಿ ಕೆಲಸ ಮಾಡಿದವರು ರಾಹುಲ್ ಖರ್ಗೆ.ಅವರು ರಾಜಕೀಯದಲ್ಲಿ ಇಲ್ಲ, ಅವರ ಬಗ್ಗೆ ಮಾತಾಡೋದನ್ನು ನಿಲ್ಲಿಸಿ.ಸಿಎ ಜಮೀನು ಖರೀದಿಸುವುದು ತಪ್ಪು ಅಂತ ಎಲ್ಲಿದೆ ನಿಯಮ?ಎಷ್ಟು ಜನ ಬಿಜೆಪಿಯವರು ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ತೆರೆದಿಲ್ಲ..? ಅವರೆಲ್ಲ ಡಾಕ್ಟರ್, ಇಂಜಿನಿಯರ್ ಆಗಿದ್ದಾರಾ?ನಾವೇನು ಲೂಟಿ ಹೊಡೆಯಲು ಮಾಡಿದ್ದೀವಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಡಾ ವಿಚಾರ ಬಂತು ಅಂತ ಈಗ ನಮ್ಮ ಕುಟುಂಬದ ಮೇಲೆ ಸುಳ್ಳು ಆರೋಪ ಬರ್ತಿದೆ.ಸಿಎ ನಿವೇಶನ ಖರೀದಿ ಮಾಡಿದ್ದಕ್ಕೆ ಇಷ್ಟೊಂದು ಹೊಟ್ಟೆ ಕಿಚ್ಚೇಕೆ..?ನಾವು ನಮ್ಮ ಅರ್ಜಿಯಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ತೆರೆಯುವ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೀವಿ.ಇಲ್ಲಿ ತಗೊಳ್ಳೋ ಬದಲು ಜವಳಿ ಪಾರ್ಕ್ ನಲ್ಲಿ ತಗೋಳ್ಳೋಕೆ ಆಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಜಮೀನು ಹಂಚಿಕೆ‌ ವಿಚಾರ; ರಾಜ್ಯಪಾಲರಿಗೆ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರು

ಬೆಂಗಳೂರು; ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಜಮೀನು ಹಂಚಿಕೆ‌ ವಿಚಾರಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸಿಎ ಸೈಟ್‌ಗಳನ್ನ ಆಸ್ಪತ್ರೆ, ಪೋಸ್ಟ್ ಆಫೀಸ್ ಹೀಗೆ ಮೊದಲೇ ನಿರ್ಧಾರ ಆಗಿರಲಿದೆ.ಇಂಡಿವಿಷ್ಯುವಲ್ ಆಗಿ ಕೊಡೋದಿಲ್ಲ, ಟ್ರಸ್ಟ್ ಗೆ ಮಾತ್ರ ಕೊಡೋದು. ಒಂದು ಮನೆಗೆ ಸೀಮಿತವಾಗಿ ಟ್ರಸ್ಟ್ ಇದೆ.ಪ್ರಿಯಾಂಕ್ ಖರ್ಗೆ, ರಾಧಾಕೃಷ್ಣ ಇವರ ಹೆಸರಲ್ಲಿದೆ.ಗುಲ್ಬರ್ಗದಲ್ಲಿ ಇದು ರಿಜಿಸ್ಟರ್ ಆಗಿದೆ. ದಲಿತರು ಅಂದ್ರೆ ಒಂದೇ ಒಂದು ಫ್ಯಾಮಿಲಿ ಅಲ್ಲ.ಅನೇಕ ದಲಿತ ಕುಟುಂಬ ಕೂಡ ಇವೆ.ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ.ಅದು ಏರೋಸ್ಪೇಸ್ ಹೆಸರಲ್ಲಿ ತೆಗೆದುಕೊಂಡಿದ್ದಾರೆ.ಇತರೆ ಟ್ರಸ್ಟ್  ಅರ್ಧ ಎಕರೆ ಸಿಕ್ಕಿದ್ರೂ ಅನುಕೂಲ ಆಗ್ತಿತ್ತು. ಇದು ನಂಬಿಕೆ‌ಯ ಪ್ರಶ್ನೆ.ಇದು ಮತ್ತೊಂದು ಮುಡಾ ಕೇಸ್ ಆಗಲಿದೆ ಎಂದಿದ್ದಾರೆ.

ಆ ಜಾಗ ಬೇಕು ಅಂತ‌ ಅನೇಕರು ಅಪ್ಲಿಕೇಶನ್ ಹಾಕಿದ್ದಾರೆ.ಇದೊಂದೇ ಕುಟುಂಬ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಂತ ಬರಲಿದೆಯಾ.?ಈ ಬಗ್ಗೆ ನಾನು ನಾಳೆ ಸಂಪೂರ್ಣ ದಾಖಲೆ‌ ಇಟ್ಟು ಮಾತಾಡ್ತೀನಿ. ನಾನು ಹಿಟ್ ಅಂಡ್ ರನ್ ಮಾಡೋದಿಲ್ಲ ಎಂದು  ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

 

ಇನ್ನು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್‌ ಪಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ. ಇಂದು ರಾಜಭವನದಲ್ಲಿ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.