ಬೆಂಗಳೂರು; ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಬಳಿಕ ಮಾತನಾಡಿದ ಅವರು ಇಂದು ಯಡಿಯೂರಪ್ಪನವರ ಜನ್ಮ ದಿನ. ದಕ್ಷಿಣ ಭಾರತದಲ್ಲಿ ಬಿಜೆಪಿ ಕಟ್ಟಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ.ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹೋರಾಟ ಮಾಡುತ್ತಿದ್ದಾರೆ.ಮತ್ತೆ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಅಧಿಕಾರಕ್ಕೆ ತರುತ್ತೇವೆ.ಅವರಿಗೆ ಅನಂತ ಅನಂತ ಅಭಿನಂದನೆಗಳು ಎಂದರು.
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ ಜನ ಮೆಚ್ಚಿದ ನಿಜವಾದ ನಾಯಕ ಇದ್ದರೆ ಯಡಿಯೂರಪ್ಪ. ಹಲವಾರು ಹೋರಾಟ ಮಾಡಿದ್ದಾರೆ. ಅಧಿಕಾರಕ್ಕೆ ಬಂದಾಗ ಅವೆಲ್ಲವನ್ನೂ ಪರಿಶೀಲಿಸಿದರು. ಕೆಳ ಸ್ತರದ ಬಡವರನ್ನು ಮೇಲೆತ್ತುವ ಕೆಲಸ ಮಾಡಿದರು ಎಂದರು. ಇನ್ನು ಯಡಿಯೂರಪ್ಪ ಅವರಿಗೆ ಬೆಂಬಲಿಗರು. ಬೃಹತ್ ಹಾರ ಹಾಕಿ ಶುಭಾಶಯ ಕೋರಿ, ಗೋ ಶಾಲೆಗಳಿಗೆ ಮೇವು ಕಳುಹಿಸಿದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ ರಾಜಕೀಯದಲ್ಲಿ ಯಡಿಯೂರಪ್ಪ ನಡೆದಿದ್ದೇ ದಾರಿ.ಯಡಿಯೂರಪ್ಪ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದೇವೆ. ರೈತ ಬೆಳೆಯುವ ಎಲ್ಲಾ ಬೆಳೆಗಳಿಗೆ ಧನ ಸಹಾಯ ನೀಡಿದ್ದರು.ಗೋ ಶಾಲೆಗಳಿಗೆ ಸರ್ಕಾರ ಮೇವು ನೀಡುತ್ತಿಲ್ಲ. ಹಾಗಾಗಿ ಗೋ ಶಾಲೆಗೆ ಹುಲ್ಲನ್ನು ಕಳಿಸಲಾಗುತ್ತಿದೆ ಎಂದರು. ಬಿಜೆಪಿ ರೈತ ಮೋರ್ಛಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಮಾತನಾಡಿ ತಾಲ್ಲೂಕಿನಲ್ಲಿ ಒಂದು ಗೋ ಶಾಲೆ ಆರಂಭಿಸಲು ಯಡಿಯೂರಪ್ಪ ಚಾಲನೆ ನೀಡಿದ್ದರು. ಅತ್ಯಂತ ಪ್ರಾಮಾಣಿಕ ರೈತ ನಾಯಕ ಯಡಿಯೂರಪ್ಪ.ನನ್ನ ಸಲಹೆ ಮೇರೆಗೆ ಗೋ ಶಾಲೆಗಳಿಗೆ ಯಡಿಯೂರಪ್ಪ ಹೆಸರಿನಲ್ಲಿ ಎಲ್ಲಾ ಗೋ ಶಾಲೆಗಳಿಗೆ ಮೇವು ಕಳಿಸಲಾಗುತ್ತಿದೆ. ಗೋ ಶಾಲೆಗೆ ಮೇವು ರದ್ದು ಮಾಡುವ ಕೆಲಸ ಸರ್ಕಾರ ಮಾಡಿದೆ.ಹಾಗಾಗಿ ಯಡಿಯೂರಪ್ಪ ಹೆಸರಿನಲ್ಲಿ ಮೇವು ಕಳಿಸಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಕೆ. ಗೋಪಾಲಯ್ಯ, ಎಸ್.ಆರ್. ವಿಶ್ವನಾಥ್, ಎಂ. ಕೃಷ್ಣಪ್ಪ, ಡಾ. ಅಶ್ವಥ್ ನಾರಾಯಣ, ಮುನಿರತ್ನ ಸೇರಿದಂತೆ ಹಲವರಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ರು. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿದ್ರು.