ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ದರ್ಶನ್ ಅವರ ಮನೆಯ ಸಿಸಿಟಿಟಿ ಫೋಟೇಜ್ ಗಳನ್ನು ರಿಟ್ರೀವ್ ಮಾಡಿದ್ದಾರೆ.ಇದರ ಬೆನ್ನಲ್ಲೇ ಪೊಲೀಸರು ಇನ್ನಷ್ಟು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.ಈಗಾಗಲೇ ಲಭ್ಯವಾಗಿರುವ ಸಿಸಿಟಿವಿ ದೃಶ್ಯವಾಳಿಗಳನ್ನು ಎಲ್ಲಾ 17 ಆರೋಪಿಗಳ ಫೋಟೋಗಳ ಜೊತೆ ಮ್ಯಾಚ್ ಮಾಡಲು ಪೊಲೀಸರು ಮುಂದಾಗಿದ್ದಾರೆ.
ಅದಕ್ಕಾಗಿ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಗಳನ್ನು ಆರೋಪಿಗಳ ಫೋಟೋಗಳ ಜೊತೆ ವಿಶೂವಲ್ ಕಂಪ್ಯಾರಿಸನ್ ಮಾಡಲು ಎಫ್ ಎಸ್ ಎಲ್ ಲ್ಯಾಬ್ ಗೆ ಕಳುಹಿಸಿದ್ದಾರೆ. ಇನ್ನು ಈ ಸಿಸಿಟಿವಿ ದೃಶ್ಯಾವಳಿಗಳ ಜೊತೆಗೆ ಆರೋಪಿಗಳ ಫೋಟೋಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಎಲ್ಲಾ ಆರೋಪಿಗಳ ಕಣ್ಣು, ಬಣ್ಣ, ದೇಹ, ಬಾಯಿ, ತುಟಿ, ಮೂಗಿನ ಆಕಾರಗಳನ್ನು ಹೋಲಿಕೆ ಮಾಡಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಇನ್ನು ಈಗಾಗಲೇ ದರ್ಶನ್ ಅವರ ಆರ್ ಆರ್ ನಗರ ನಿವಾಸದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ದರ್ಶನ್ ಅವರ ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಡಿಲೀಟ್ ಮಾಡಲಾಗಿತ್ತು. ಘಟನೆ ಬಳಿಕ ಆರೋಪಿಗಳು ದರ್ಶನ್ ಮನೆಗೆ ಭೇಟಿ ನೀಡಿದ್ದರು. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಇದೀಗ ಆ ಎಲ್ಲಾ ದೃಶ್ಯಾವಳಿಗಳನ್ನು ರಿಟ್ರೀವ್ ಮಾಡಲಾಗಿದೆ. ಅದರಲ್ಲಿ ಪೊಲೀಸರಿಗೆ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರೋದಕ್ಕೆ ಪೊಲೀಸರಿಗೆ ಸಿಕ್ತು ಮಹತ್ತರ ಸಾಕ್ಷಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಇಂದಿಗೂ ಪರದಾಡುತ್ತಲೇ ಇದ್ದಾರೆ. ಮತ್ತೊಂದು ಕಡೆ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ಮುಂದೂಡಿಕೆಯಾಗಿದೆ. ಇನ್ನು ಮೊನ್ನೆ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ದರ್ಶನ್ ರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗಾಗಿ ಸದ್ಯಕ್ಕಂತೂ ದರ್ಸನ್ ಗೆ ಜೈಲೂಟವೇ ಗ್ಯಾರಂಟಿ ಅನ್ನೋ ಹಾಗಾಗಿದೆ.
ಇನ್ನು ಸೆಪ್ಟಂಬರ್ 8 ರ ಒಳಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಬೇಕು. ಹಾಗಾಗಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ಎಲ್ಲಾ ತಯಾರಿಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನು ಕೆಲವು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರ.ಹೀಗಿರುವಾಗ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ಇದೀಗ ಮಹತ್ವದ ಸಾಕ್ಷ್ಯವೊಂದು ಲಭ್ಯವಾಗಿದೆ ಎನ್ನಲಾಗಿದೆ.
ಅದೇನಪ್ಪಾ ಅಂದ್ರೆ ನಟ ದರ್ಶನ್ ಅವರ ರಾಜರಾಜೇಶ್ವರಿ ನಗರದ ಮನೆಯಲ್ಲಿ ಘಟನೆಯ ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಡಿಲೀಟ್ ಮಾಡಲಾಗಿತ್ತು ಅಂತಾ ಹೇಳಲಾಗಿತ್ತು. ಇದೀಗ ಆ ದೃಶ್ಯವಳಿಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ನಡೆದ ಸಂದರ್ಭ ಅಂದರೆ ಜೂನ್.8, ಜೂನ್ 9 ಹಾಗೂ ಜೂನ್ 10ರಂದು ನಟ ದರ್ಶನ್ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ನಲ್ಲಿದ್ದ ದೃಶ್ಯಾವಳಿಯನ್ನು ಡಿಲೀಟ್ ಮಾಡಲಾಗಿತ್ತು. ಸಿಸಿಟಿವಿ ಡಿವಿಆರ್ ಕೊಂಡೊಯ್ತಿದ್ದಂತ ಪೊಲೀಸರು ಅದರಲ್ಲಿನ ವೀಡಿಯೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಮನೆಗೆ ಪ್ರಕರಣದ ಆರೋಪಿಗಳು ಬಂದು ಹೋಗಿರೋದು ಸಿಸಿಟಿವಿ ರಿಟ್ರೀವ್ ದೃಶ್ಯಾವಳಿಯಲ್ಲಿ ಇದೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ ಮೃತದೇಹ ಸಾಗಿಸುತ್ತಿದ್ದರ ಬಗ್ಗೆ ಸಿಕ್ಕ ಸಾಕ್ಷ್ಯಾಧಾರಗಳಲ್ಲಿ ನಟ ದರ್ಶನ್ ಫಿಂಗರ್ ಪ್ರಿಂಟ್ ಕೂಡ ದೊರೆತಿದೆ ಎನ್ನಲಾಗುತ್ತಿದೆ.
ಮತ್ತೊಂದು ಕಡೆ ಪವಿತ್ರಾ ಗೌಡಗೂ ರೇಣುಕಾಸ್ವಾಮಿ ಕಳುಹಿಸಿದ್ದ ಎಲ್ಲಾ ಮೆಸೇಜ್ ಗಳನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ವಾಟ್ಸ್ ಅಪ್, ಫೇಸ್ ಬುಕ್, ಇನ್ಸ್ಟಾಗ್ರಾಂನ ಎಲ್ಲಾ ಸಂದೇಶಗಳನ್ನು ರಿಟ್ರೀವ್ ಮಾಡಿರೋದಾಗಿ ಹೇಳಲಾಗುತ್ತಿದೆ. ಹಾಗಾಗಿ ಬಲವಾದ ಸಾಕ್ಷ್ಯಗಳು ಸಿಕ್ಕಿರೋದರಿಂದ ಸದ್ಯಕ್ಕೆ ದರ್ಶನ್ ಅವರಿಗೆ ಪ್ರಕರಣದಿಂದ ಪಾರಾಗೋದು ಕಷ್ಟ ಎನ್ನಲಾಗುತ್ತಿದೆ.