ಮನೆ Latest News ತುಮಕೂರು: ಜಾತಿಗಣತಿ ವರದಿ ಅನುಷ್ಠಾನಕ್ಕೆ ಗುಬ್ಬಿ ಶಾಸಕ, ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ವಿರೋಧ

ತುಮಕೂರು: ಜಾತಿಗಣತಿ ವರದಿ ಅನುಷ್ಠಾನಕ್ಕೆ ಗುಬ್ಬಿ ಶಾಸಕ, ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ವಿರೋಧ

0

ತುಮಕೂರು:  ಜಾತಿಗಣತಿ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕನಿಂದಲೇ ವಿರೋಧ ಕೇಳಿ ಬಂದಿದೆ. ಗುಬ್ಬಿ ಶಾಸಕ, ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ ರಿಂದ ಜಾತಿಗಣತಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ವರದಿಯ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಂತರ ಕ್ಯಾಬಿನೆಟ್ ಗೆ ತರಲಿ ಎಂದಿದ್ದಾರೆ.ಮೇಲ್ನೋಟಕ್ಕೆ ಇದು ಅವೈಜ್ಞಾನಿಕ ಜಾತಿಗಣತಿ.ಎಲ್ಲಾ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು.ಆ ರೀತಿಯಲ್ಲಿ ವರದಿಯನ್ನ ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದು ತುಮಕೂರಿನಲ್ಲಿ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.

ನಾನು ಹಿಂದೆ ಇದರ ಬಗ್ಗೆ ಒಂದು ಸಾರಿ ಪ್ರಸ್ತಾಪ ಮಾಡಿದ್ದೆ.ನಮ್ಮ ಒಕ್ಕಲಿಗರಲ್ಲಿ ಒಳ ಪಂಗಡಗಳು ಇವೆ.ಲಿಂಗಾಯತರಲ್ಲೂ ಒಳಪಂಗಡಗಳು ಇವೆ. ಕುಂಚಿಟಿಗರು ಕೇವಲ ಕುಂಚಿಟಿಗ ಅಂತ ಬರೆದಿರ್ತಾರೆ.ನಮ್ಮಲ್ಲಿ ಕುಂಚಿಟಿಗ ಒಕ್ಕಲಿಗ ಅಂತ ಬರೆದಿರಲ್ಲ. ಸರ್ಪ ಒಕ್ಕಲಿಗರು ಇದ್ದಾಗ ಕೇವಲ ಸರ್ಪರು ಅಂತ ಬರಿತಾರೆ. ಅದ್ಯಾವುದು ಕೂಡಾ ಆಗ ನಮ್ಮ ಸಮುದಾಯದ ಪಟ್ಟಿಯಲ್ಲಿ ಬರಲ್ಲ.ಇವರು ವರದಿ ತಯಾರು ಮಾಡಿದವರು ಕೂಡಾ ಕುಂಚಿಟಿಗ ಅಂತ ಬರೆದುಕೊಂಡು ಹೋಗಿರ್ತಾರೆ.ನಮ್ಮಲ್ಲಿ ವಿರೋಧ ಯಾಕೆ ಅಂದ್ರೆ ಒಟ್ಟಿಗೆ ಒಕ್ಕಲಿಗ ಅಂತ ಮಾಡಲಿ ಅಂತ.ಲಿಂಗಾಯತ ಸಮುದಾಯದಲ್ಲೂ ಸಹ ಅದೇ ರೀತಿ ಆಗಿರಬಹುದು .ಅವರಲ್ಲಿಯೂ ಅನೇಕ ಒಳಪಂಗಡಗಳು ಇವೆ.ಆದ್ದರಿಂದ ಅದನ್ನ ಸರಿಯಾದ ರೀತಿಯಲ್ಲಿ ಮಾಡಿದ್ದಾರಾ ಅನ್ನೋ ಅನುಮಾನ ಇದೆ ಎಂದಿದ್ದಾರೆ.

ಜಾತಿಗಣತಿ ಸರಿಯಾಗಿ ಮಾಡದೇ ಇದ್ದಾಗ ಜನಾಂಗಕ್ಕೆ ಅನ್ಯಾಯ ಆಗುತ್ತೆ ಅನ್ನುವ ಕಳಕಳಿ ಎಲ್ಲರಲ್ಲಿ ಇದೆ.ಆ ದೃಷ್ಟಿ ಇಟ್ಟುಕೊಂಡು ಈ ಸಮುದಾಯಗಳು ವಿರೋಧ ವ್ಯಕ್ತಪಡಿಸ್ತಿದ್ದಾರೆ ಅಂತ ನನಗೆ ಅನ್ಸುತ್ತೆ.ವರದಿ ಯಾವ ರೀತಿ ತಯಾರು ಮಾಡಿದ್ದಾರೆ ಅನ್ನೋದು ಯಾರಿಗೂ ಗೊತ್ತಿಲ್ಲ.ಇದುವರೆಗೂ ಯಾರಿಗೂ ಗೊತ್ತಿಲ್ಲ.ಆ ವರದಿಯನ್ನ ಸರ್ಕಾರಕ್ಕೆ ಸಲ್ಲಿಸಿದ್ದಾರೆ.ಆ ರೀತಿಯಾದರೇ ಅನ್ಯಾಯ ಆಗುತ್ತಲ್ಲ ಎಂದಿದ್ದಾರೆ.

ಇನ್ನುಸಿಎಲ್ ಪಿ ಸಭೆಯಲ್ಲಿ ವರದಿ ಬಗ್ಗೆ ಚರ್ಚೆ ಆಗಲಿ ಎಂದು ಶಾಸಕರ ಒತ್ತಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ನಮ್ಮಲ್ಲಿ ಎಲ್ಲರಿಗೂ ಕೂಡಾ ಅದೊಂದು ದುಗುಡ ಇದೆ.ಯಾವ ರೀತಿಯಾಗಿ ಅವರು ತಯಾರು ಮಾಡಿದ್ದಾರೆ ಅನ್ನೊದು ನಮಗ್ಯಾರಿಗೂ ಸ್ಪಷ್ಟತೆ ಇಲ್ಲ.ಹಾಗಾಗಿ ಅದರ ಬಗ್ಗೆ ಸ್ಪಷ್ಟನೆ ನೀಡಿ, ಅದರ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡಿ ಜಾರಿಗೆ ತರಬೇಕಾಗುತ್ತೆ ಎಂದ ಅವರು ಎಲ್ಲೋ ಒಂದು ಕಡೆ ಕುಳಿತು ವರದಿ ತಯಾರಿಸಿದ್ದಾರೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ್ರು. ಇರಬಹುದು, ಅದನ್ನೆಲ್ಲಾ ನೋಡಿದಾಗ ಗೊತ್ತಾಗುತ್ತೆ.ನಮ್ಮ ಊರು ನಮ್ಮ ತಾಲ್ಲೂಕು ತಗೊಂಡ್ರೆ,ನಮಗೆ ಸಂಪೂರ್ಣ ಮಾಹಿತಿ ಇರುತ್ತೆ .ಅದನ್ನ ನಾವು ನೋಡಿದ್ರೆ ಗೊತ್ತಾಗುತ್ತೆ.ನಮ್ಮ ಹತ್ರ ಎಲ್ಲಾ ಮಾಹಿತಿ ಇರುತ್ತೆ.ಹೀಗಾಗಿ ವರದಿಯನ್ನ ನೋಡಿದ ತಕ್ಷಣ ಗೊತ್ತಾಗುತ್ತೆ.ಇದು ಸರಿನೋ ತಪ್ಪೋ ಅಂತಾ ಎಂದು ತುಮಕೂರಿನಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.