ಬೆಂಗಳೂರು: ನಿನ್ನೆ ನಿಧನರಾದ ಸ್ಯಾಂಡಲ್ ವುಡ್ ಹಿರಿಯ ನಟ ಸರಿಗಮವಿಜಿ ಅವರ ಅಂತ್ಯಕ್ರಿಯೆ ಇಂದು ನೆರವೇರಿತು.
ಚಾಮರಾಜಪೇಟೆಯ ಚಿತಾಗಾರದಲ್ಲಿ ಸರಿಗಮ ವಿಜಿ ಅವರ ಅಂತ್ಯಸಂಸ್ಕಾರ ನೆರವೇರಿತು. ಬಲಿಜ ಸಂಪ್ರದಾಯದಂತೆ ಸರಿಗಮ ವಿಜಿ ಅವರ ಅಂತ್ಯಸಂಸ್ಕಾರ ನೆರವೇರಿತು. ಸರಿಗಮ ವಿಜಿ ಅವರ ಹಿರಿಯ ಪುತ್ರ ರೋಹಿತ್ ಅವರು ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಅಂತ್ಯಕ್ರಿಯೆಗೂ ಮುನ್ನ ಇನ್ನೂ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಜಯೇಂದ್ರ, ಚಲವಾದಿ ನಾರಾಯಣಸ್ವಾಮಿ, ನಟ ಧ್ರುವ ಸರ್ಜಾ, ಹಿರಿಯ ನಟ ಸುಂದರ್ ರಾಜ್, ರಮೇಶ್ ಭಟ್, ಶ್ರೀನಿವಾಸ್ ಮೂರ್ತಿ, ನಟಿ ರೂಪಿಕಾ ಸೇರಿದಂತೆ ಹಲವು ಗಣ್ಯರು ಆಗಮಿಸಿ ಸರಿಗಮ ವಿಜಿ ಅವರ ಅಂತಿಮ ದರ್ಶನ ಪಡೆದರು.
ಸ್ಯಾಂಡಲ್ ವುಡ್ ನ ಹಿರಿಯ ನಟ ಸರಿಗಮ ವಿಜಿ ಅಸ್ತಂಗತ
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಸರಿಗಮ ವಿಜಿ ಅಸ್ತಂಗತರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.
ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ ಸರಿಗಮ ವಿಜಿ ಅವರು ಶ್ವಾಸಕೋಶಕ್ಕೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಯಶವಂತಪುರದ ಬಳಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಫಲಿಸದೇ ವಿಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಾಳೆ ಅಂದರೆ ಜನವರಿ 16 ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಸರಿಗಮ ವಿಜಿ ಅವರ ಅಂತ್ಯ ಕ್ರಿಯೆ ನಡೆಯಲಿದೆ.
ರಂಗಭೂಮಿಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಸರಿಗಮ ವಿಜಿ ಅವರು ಸಂಸಾರದಲ್ಲಿ ಸರಿಗಮ ಎಂಬ ನಾಟಕದಲ್ಲಿ ಅಭಿನಯಿಸಿದ್ದರು. ಇದೇ ಕಾರಣಕ್ಕೆ ಅವರ ಹೆಸರಿನೊಂದಿಗೆ ಸರಿಗಮ ಎಂಬ ಪದ ಸೇರಿಕೊಂಡಿತು. ಸರಿಗಮ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಬೆಳುವಲದ ಮಡಿಲಲ್ಲಿ ಸಿನಿಮಾ ಅವರು ಅಭಿನಯಿಸಿದ ಮೊದಲ ಸಿನಿಮಾ. ಸರಿಗಮ ವಿಜಿ ಅವರು 2018ರವರೆಗೆ 269 ಸಿನಿಮಾಗಳಲ್ಲಿ ನಟಿಸಿದ್ದಾರೆ. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳನ್ನೂ ನಿರ್ದೇಶನವನ್ನೂ ಮಾಡಿದ್ದರು.
ಇನ್ನು ಸರಿಗಮ ವಿಜಿ ನಿಧನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಮ್ ಕಂಬನಿ ಮಿಡಿದಿದ್ದಾರೆ. ಸರಿಗಮ ವಿಜಿ ನನ್ನ ಆಪ್ತ ಗೆಳೆಯ.ಅವನನ್ನು ಕಳೆದುಕೊಂಡಿರೋದು ನೋವಿನ ಸಂಗತಿ ಎಂದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಮಾತ್ರವಲ್ಲ. ಎಲ್ಲಾ ಕ್ಷೇತ್ರದಲ್ಲೂ ಅಪಾರ ಗೆಳೆಯರನ್ನು ಹೊಂದಿದ್ದಾರೆ. ನಾಟಕದಿಂದ ಬಂದ ದುಡ್ಡನ್ನು ಅನಾಥರ ಸಹಾಯಕ್ಕೆ ಬಳಸ್ತಿದ್ರು. ಒಳ್ಳೆಯ ಮಾನವೀಯ ಗುಣಗಳುಳ್ಳ ವ್ಯಕ್ತಿತ್ವ. ನಿಜಕ್ಕೂ ಇಂಡಸ್ಟ್ರಿಗೆ ಇದು ತುಂಬಲಾರದ ನಷ್ಟ ಎಂದಿದ್ದಾರೆ.
ಇನ್ನು ಅಂತಿಮನ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಶಾಸಕ ಗೋಪಾಲಯ್ಯ ಸರಿಗಮ ವಿಜಿ ಅವ್ರ ಅಗಲಿಕೆ ಚಿತ್ರರಂಗಕ್ಕೆ.. ನಮಗೆ ದೊಡ್ಡ ನಷ್ಟ. ನನಗೂ ತುಂಬಾ ಆತ್ಮೀಯ. ನಮ್ ಕಚೇರಿ ಹತ್ತಿರದಲ್ಲೇ ಇರೋರು. ನಾವೆಲ್ಲ ಆತ್ಮೀಯರಾಗಿದ್ದವರು. ಅವ್ರ ಕುಟುಂಬ ನಮ್ ಕುಟುಂಬ ಆತ್ಮೀಯವಾಗಿದ್ವಿ. ಭಗವಂತ ಅವ್ರ ಕುಟುಂಬಕ್ಕೆ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ. ಮೊಮ್ಮಗನ ನಾಮಕರಣ ಕಾರ್ಯವನ್ನು ಇಸ್ಕಾನ್ ನಲ್ಲಿ ಮಾಡಿದ್ರು . ಅವತ್ತೇ ಕೊನೆದಾಗಿ ಭೇಟಿ ಮಾಡಿದ್ದೆ ಎಂದು ತಿಳಿಸಿದರು.
ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಸರಿಗಮ ವಿಜಿ ಅವರ ಅಂತ್ಯ ಕ್ರಿಯೆ ನಡೆಯಲಿದೆ.