ಬೆಂಗಳೂರು; ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಹಿನ್ನೆಲೆ ಡಿ. 1 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೃಹತ್ ಸಮಾವೇಶದ ಕುರಿತು ಚರ್ಚೆ ನಡೆಸೋದಕ್ಕೆ ಡಿ ಕೆ ಶಿವಕುಮಾರ್ ಸಭೆ ಕರೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ನಡೆಯಲಿದೆ. ಸಭೆಗೆ ಮೈಸೂರು ಭಾಗದ ಜಿಲ್ಲೆಯ ಕಾಂಗ್ರೆಸ್ ನಾಯಕರಿಗರ ಬರುವಂತೆ ಸೂಚನೆ ನೀಡಲಾಗಿದೆ.
ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು ಭಾಗದ ನಾಯಕರಿಗೆ ಸೂಚನೆ ಕೊಡಲಾಗಿದೆ. ಸಂಸದರು, ಶಾಸಕರು, ಎಂಎಲ್ಸಿಗಳು, ಪದಾಧಿಕಾರಿಗಳು ಸೇರಿದಂತೆ ಎಲ್ಲ ನಾಯಕರು ಬರುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ಕೊಡಲಾಗಿದೆ.
ಹಾಸನ ಸಮಾವೇಶದ ಬಗ್ಗೆ ರಾಹುಲ್ ಗಾಂಧಿ ಅವರ ಜೊತೆ ಸಿಎಂ. ಚರ್ಚೆ; ಸಮಾವೇಶಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್
ನವದೆಹಲಿ; ಹಾಸನ ಸಮಾವೇಶದ ಬಗ್ಗೆ ರಾಹುಲ್ ಗಾಂಧಿ ಅವರ ಜೊತೆ ಸಿಎಂ. ಚರ್ಚೆ ನಡೆಸಿದ್ದು ಸಮಾವೇಶಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಸಮಾವೇಶದ ಹಿನ್ನೆಲೆಯನ್ನು ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ವಿವರಿಸಿದ್ದಾರೆ.
ಜೆಡಿಎಸ್ ಭದ್ರಕೋಟೆಯಲ್ಲಿ ಸಮಾವೇಶ ನಡೆಸಿದರೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೆ ಅನುಕೂಲ ಎಂಬುದನ್ನು ಸಿದ್ದರಾಮಯ್ಯ ವಿವರಿಸಿದ್ದಾರೆ. ಪಕ್ಷದ ಎಲ್ಲ ನಾಯಕರೂ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕಾಂಗ್ರೆಸ್ ಪಕ್ಷ ಮತ್ತು ಹಿಂದುಳಿದ ವರ್ಗಳ ಒಕ್ಕೂಟದ ಅಡಿಯಲ್ಲಿ ಸಮಾವೇಶ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ.
ಇದರ ಮಧ್ಯೆ ರಣದೀಪ್ ಸಿಂಗ್ ಸುರ್ಜೇವಾಲ ಡಿಸಿಎಂ ಡಿಕೆಶಿ ಭೇಟಿಯಾಗಿದ್ದಾರೆ. ಪ್ರತ್ಯೇಕವಾಗಿ ಸುರ್ಜೇವಾಲ ಡಿಕೆಶಿ ಭೇಟಿ ಮಾಡಿದ್ದಾರೆ.ಸಂಸತ್ ಭವನದಲ್ಲಿ ಭೇಟಿಯಾಗಿ ಇಬ್ಬರು ನಾಯಕರು ಚರ್ಚೆ ಮಾಡಿದ್ದಾರೆ. ಹಾಸನ ಸಮಾವೇಶದ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿದ್ದಾರೆ. ಖರ್ಗೆಯವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಉಪಚುನಾವಣೆಗಳ ಗೆಲುವು ಸೇರಿದಂತೆ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಸ್ವಾಭಿಮಾನಿ ಸಮಾವೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರ ನೀಡಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸುವಂತೆ ಖರ್ಗೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ಸಮಾವೇಶದ ರೀತಿ ಬಿಂಬಿತವಾಗಬಾರದು ಎಂದು ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಳಿಕ ಮಾತಾನಾಡಿದ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಮತ್ತು ಸ್ವಾಬಿಮಾನಿಗಳ ಒಕ್ಕೂಟದಿಂದ ಸಂಯುಕ್ತಾಶ್ರಯದಲ್ಲಿ ಸಮಾವೇಶ ಮಾಡಲಾಗುತ್ತದೆ. ರಾಹುಲ್ ಗಾಂಧಿ, ಖರ್ಗೆ, ಸುರ್ಜೆವಾಲರಿಗೂ ಹೇಳಿದ್ದೇನೆ. ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರನ್ನು ಆಹ್ವಾನ ಕೊಟ್ಟಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೂ ಹೇಳಿದ್ದಾರೆ ಎಂದಿದ್ದಾರೆ.
ಸಮಾವೇಶದ ಬಗ್ಗೆ ಮಾತನಾಡಿದ ಸಚಿವ ಎಚ್ ಸಿ ಮಹದೇವಪ್ಪ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಶೋಷಿತ ಸಮುದಾಯಗಳ ಸಂಯುಕ್ತ ಆಶ್ರಯದಲ್ಲಿ ಸಮಾವೇಶ ಮಾಡುತ್ತೇವೆ. ಇದರಲ್ಲಿ ನೋ ಕನಫ್ಯೂಷನ್. ಸ್ಪಷ್ಟವಾಗಿ ಹೇಳುತ್ತಿದ್ದೇವೆ. ಪತ್ರದ ಬಗ್ಗೆ ಯಾರಿಗೂ ಗೊತ್ತಿಲ್ಲ, ನೀವು ಹೇಳುತ್ತಿರುವಂತ ಯಾವುದೇ ಚರ್ಚೆ ಇಲ್ಲ. ಸಮಾವೇಶ ಮಾಡ್ತಿರೋದು ಶೋಷಿತ ಸಮುದಾಯಗಳ ಒಕ್ಕೂಟ. ಅವರು ಮತ್ತು ಪಕ್ಷ ಇಬ್ಬರೂ ಕೂಡ ಸೇರಬೇಕು ಎಂಬುದು ನಮ್ಮ ಅಪೇಕ್ಷೆ.ಅದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸಮಾವೇಶ ಮಾಡುತ್ತೇವೆ ಎಂದಿದ್ದಾರೆ.
ಪಶುಸಂಗೋಪನ ಸಚಿವ ಕೆ. ವೆಂಕಟೇಶ್ ಮಾತನಾಡಿ ಇದು ಅಹಿಂದ ಸಮಾವೇಶ ಅಂತಲ್ಲ. ಪಕ್ಷ ಹಾಗೂ ಸಂಘಟನೆ ಸೇರಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಬೇರೆಯಾವರು ಏನಾದ್ರು ವ್ಯಾಖ್ಯಾನ ಮಾಡಲಿ. ಇದು ಪಕ್ಷದ ಕಾರ್ಯಕ್ರಮ. ಪದೆ ಪದೆ ಮೈಸೂರಿನಲ್ಲಿ ಕಾರ್ಯಕ್ರಮ ಆಗಿವೆ. ಬೇರೆ ಕಡೆ ಮಾಡೋಣ ಅಂತ ಹಾಸನದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದು ಯಾವುದೇ ಶಕ್ತಿ ಪ್ರದರ್ಶನ ಅಲ್ಲ. ಈ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರು ಕೂಡ ಭಾಗಿಯಾಗುತ್ತಾರೆ.ದೇವೇಗೌಡರು, ಯಡಿಯೂರಪ್ಪ ಅವರ ಸಮುದಾಯದ ನಾಯಕರಾಗಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅಹಿಂದ ಅಂತಾರೆ . ಇದು ಪಕ್ಷದ ಸಂಘಟನೆಯ ಕಾರ್ಯಕ್ರಮ. ಯಾಕೆ ಮಾಡಬಾರದು? ಪಕ್ಷ ಸಂಘಟನೆ ಯಾವಾಗ ಬೇಕಾದ್ರೂ ಮಾಡಬಹುದು. ಜಿಲ್ಲಾಪಂಚಾಯತ್,ತಾಲೂಕು ಪಂಚಾಯತ ಚುನಾವಣೆ ಬರ್ತಿದೆ. ಕಾರ್ಯಕರ್ತರ ಸಂಘಟನೆಯ ದೃಷ್ಟಿಯಿಂದ ಕಾರ್ಯಕ್ರಮ ಮಾಡುತಿದ್ದೆವೆ. ಸಿದ್ದರಾಮಯ್ಯ ಅವರನ್ನು ಪೋಕಸ್ ಮಾಡಲು ಮಾಡುತ್ತಿಲ್ಲ. ಪಕ್ಷದ ಅಧ್ಯಕ್ಷರ ಆದಿಯಾಗಿ ಎಲ್ಲ ಭಾಗವಹಿಸುತ್ತಾರೆ ಎಂದಿದ್ದಾರೆ.