ಮನೆ Latest News ಹಾಸನ; ಆಪ್ತನಿಂದಲೇ ಟ್ಯಾಪ್ ಆದ್ರಾ ಸೂರಜ್ ರೇವಣ್ಣ; ದೂರು ಕೊಟ್ಟು ಎಸ್ಕೇಪ್ ಆದ ಶಿವಕುಮಾರ್

ಹಾಸನ; ಆಪ್ತನಿಂದಲೇ ಟ್ಯಾಪ್ ಆದ್ರಾ ಸೂರಜ್ ರೇವಣ್ಣ; ದೂರು ಕೊಟ್ಟು ಎಸ್ಕೇಪ್ ಆದ ಶಿವಕುಮಾರ್

0

ಹಾಸನ; ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅರೆಸ್ಟ್ ಆದ ಬೆನ್ನಲ್ಲೇ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ನಿನ್ನೆ ಆದೇಶವನ್ನು ನೀಡಿತ್ತು. ಅದರ ಬೆನ್ನಲ್ಲೇ ಸೂರಜ್ ಜೈಲು ಪಾಲಾಗಿದ್ದರು.

ಇನ್ನು ಮೊನ್ನೆ ರಾತ್ರಿ ಸೂರಜ್ ರೇವಣ್ಣ ಅರೆಸ್ಟ್ ಆಗುತ್ತಿದ್ದಂತೆ ಅವರ ಆಪ್ತ ಶಿವಕುಮಾರ್ ನಾಪತ್ತೆಯಾಗಿದ್ದು, ಆಪ್ತನಿಂದಲೇ ಸೂರಜ್ ಟ್ರ್ಯಾಪ್ ಆಗಿದ್ದಾರೆ ಎನ್ನಲಾಗುತ್ತಿದೆ. ಸೂರಜ್ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದ. ಅದರ ಬೆನ್ನಲ್ಲೇ ಶಿವಕುಮಾರ್ ಕೂಡ ಸೂರಜ್ ಪರವಾಗಿ ದೂರು ನೀಡಿದ್ದರು.ಆದರೆ ಇದೀಗ  ಶಿವಕಪುಮಾರ್ ಸೂರಜ್ ಬಂಧನವಾಗುತ್ತಿದ್ದಂತೆ ನಾಪತ್ತೆಯಾಗುತ್ತಿದ್ದಾರೆ. ಅಲ್ಲದೇ ಮೊಬೈಲ್ ಕೂಡ ಸ್ವಿಚ್ಛ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗುತ್ತಿದೆ.

ಇದರ ಬೆನ್ನಲ್ಲೇ ಸೂರಜ್ ಆಪ್ತರಾಗಿರುವ ಶಿವಕುಮಾರ್ ಅವರೇ ಎಂಎಲ್ಸಿ ಸೂರಜ್ ರೇವಣ್ಣ ಅವರನ್ನು ಟ್ರ್ಯಾಪ್ ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಸೂರಜ್  ಅವರ ವಿಶ್ವಾಸ ಗಳಿಸಿದ್ದ ಶಿವಕುಮಾರ್ ಅದನ್ನು ಬಂಡವಾಳ ಮಾಡಿಕೊಂಡು ಸೂರಜ್ ರನ್ನು ಸಿಲುಕಿಸಿದ್ದಾರೆ ಎನ್ನಲಾಗಿದೆ. ಇನ್ನು ದೂರು ಕೊಟ್ಟು ಇದೀಗ ನಾಪತ್ತೆ ಆಗಿರೋ ಶಿವಕುಮಾರ್ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಶಿವಕುಮಾರ್ ವಿಚಾರಣೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ,

 

ಶಿವಕುಮಾರ್ ಪೊಲೀಸರ ಕೈಗೆ ಸಿಕ್ಕಿದ್ರೆ ಸತ್ಯಾಂಶ ಹೊರ ಬರಲಿದೆ. ಹತ್ತು ಹಲವು ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಇಂದು ಶಿವಕುಮಾರ್ ಪೊಲೀಸರ ಎದುರು ವಿಚಾರಣೆಗೆ ಹಾಜರಾಗೋ ಸಾಧ್ಯತೆಯಿದೆ ಎನ್ನಲಾಗಿದೆ.ಶಿವಕುಮಾರ್ ಬಂದರೆ ಅವರೇ ನೀಡಿದ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಯಲಿದೆ. ಇನ್ನು ಮೊನ್ನೆ ರಾತ್ರಿಯಿಡಿ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ರು. ಈ ವೇಳೆ ಸೂರಡ್ ರೇವಣ್ಣ ಶಿವಕುಮಾರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರು. ತಮ್ಮ ವಿರುದ್ದ ಶಿವಕುಮಾರ್  ಷಡ್ಯಂತ್ರ ಮಾಡಿದ್ದಾನೆಂದು ಸೂರಜ್ ಆರೋಪ ಮಾಡಿದ್ರು. ಇದರ ಬೆನ್ನಲ್ಲೇ ಶಿವರುಮಾರ್ ನಾಪತ್ತೆಯಾಗಿರೋದು ಹಲವು ಅನುಮಾನಗಳನ್ನು ಮೂಡಿಸಿದೆ.

ಅಂದ್ಹಾಗೆ ಸೂರಜ್ ರೇವಣ್ಣಗೆ ಸಂತ್ರಸ್ಥ ಯುವಕನನ್ನು ಶಿವಕುಮಾರೇ ಪರಿಚಯ ಮಾಡಿಸಿದ್ದ. ಅಲ್ಲದೇ ದೂರಿನಲ್ಲಿ ಈ ಬಗ್ಗೆ ಶಿವಕುಮಾರ್ ತಿಳಿಸಿದ್ದ. ಯುವಕ ನನ್ನ ಬಳಿ ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಕೇಳಿಕೊಂಡಿದ್ದ.ನೀನೇ ಹೋಗಿ ಬಾಸ್ ಅನ್ನು ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ . ಹಾಗೇ ಹೋದವನು ವಾಪಾಸ್ ಬಂದು ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ಶಿವಕುಮಾರ್ ದೂರು ಕೊಟ್ಟಿದ್ದ.

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ.ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು.ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದ.ಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು.ನಾನೇನು ತಪ್ಪು ಮಾಡಿಲ್ಲ,ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪ ಮಾಡಿದ್ದ.

ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಐದು ಕೋಟಿ ಬಳಿಕ ಮೂರು ಕೋಟಿ ,ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ ಎಂದಿದ್ದಾರೆ.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದ ಎಂದು ಶಿವಕುಮಾರ್ ಸೂರಜ್ ಪರವಾಗಿ ದೂರು ನೀಡಿದ್ದ. ಇದಾದ ಬೆನ್ನಲ್ಲೇ ಸೂರಜ್ ಆಗಿದ್ದರು. ಇತ್ತ ಶಿವಕುಮಾರ್ ನಾಪತ್ತೆಯಾಗಿದ್ದಾನೆ