ಬೆಂಗಳೂರು; ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ ಮೃತ ಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಎದುರು ಯಾವುದೇ ದುರ್ಘಟನೆ ನಡೆದಿಲ್ಲ. ನಿರೀಕ್ಷೆಗೂ ಮೀರಿ ಜನರು ಸ್ಟೇಡಿಯಂಗೆ ಬಂದಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 35 ಸಾವಿರ ಆಸನದ ವ್ಯವಸ್ಥೆಯಿದೆ. ಆದ್ರೆ 2 ಲಕ್ಷಕ್ಕೂ ಅಧಿಕ ಜನರು ಜಮಾಯಿಸಿದ್ದಾರೆ. ಈ ವೇಳೆ ದೊಡ್ಡ ದುರಂತ ಸಂಭವಿಸಿದೆ. ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ಪರಿಹಾರ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡ್ತೀವಿ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ದುರಂತ ಕುರಿತು ಸೂಕ್ತ ತನಿಖೆಗೆ ಸೂಚಿಸುತ್ತೇನೆ ಎಂದು ತಮ್ಮ ಕಾವೇರಿ ನಿವಾಸದಲ್ಲಿ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು ನಿನ್ನೆ ಮಧ್ಯ ರಾತ್ರಿ ತನಕವೂ ಕೂಡ ಮ್ಯಾಚ್ ನಡೆದಿತ್ತು. ಇವತ್ತು ವಿಜಯೋತ್ಸವ ಆಚರಣೆ ಮಾಡಲಿಕ್ಕೆ ಕ್ರಿಕೇಟ್ ಅಸೋಸಿಯೇಷನ್ ಕಾರ್ಯಕ್ರಮ ಹಮ್ಮಿಕೊಂಡಿದ್ರು.ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಟು ಮಾಡಿದ್ದೆವು. ಅಲ್ಲಿ ವಿಜಯೋತ್ಸವ ಆಚರಣೆ ಮಾಡುವ ಸಂದರ್ಭದಲ್ಲಿ ಬಹಳ ದೊಡ್ಡ ದುರಂತ ನಡೆದಿದೆ.ಜನ ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಿತ್ತು. ಸರ್ಕಾರ ಇದಕ್ಕೋಸ್ಕರ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ನಮ್ಮ ನಿರೀಕ್ಷೆ ಗೂ ಮೀರಿ ಜನ ಅಭಿಮಾನಿಗಳು ಸೇರಿದ್ದರು. ವಿಧಾನಸೌದದ ಮುಂದೆ 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ರು. ವಿಧಾನಸೌದದ ಮುಂದೆ ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಈ ದುರಂತ ಆಗಿದೆ. ಯಾರೂ ಕೂಡ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೇಟ್ ಅಸೋಸಿಯೇಷನ್ ಹಾಗೂ ನಾವೂ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ನಲ್ಲಿ 35 ಸಾವಿರ ಜನ ಕೂರಬಹುದು . ಎರಡು ಮೂರು ಲಕ್ಷ ಜನ ಬಂದುಬಿಟ್ಟಿದ್ದಾರೆ. ಕ್ರಿಕೇಟ್ ಅಸೋಸಿಯೇಷನ್ ಬೆಳಗ್ಗೆ ನಮಗೆ ಮಾಹಿತಿ ಕೊಟ್ಟಿದ್ದು. ಯಾರೂ ಕೂಡ ಇಷ್ಟು ಜನರನ್ನು ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ನಲ್ಲಿ ಎಷ್ಟು ಕೆಪ್ಯಾಸಿಟಿ ಇದೆ ಅಷ್ಟು ಜನರ ಮತ್ತು ಹೆಚ್ಚು ಬರಬಹುದು ಅಂತ ನಿರೀಕ್ಷೆ ಮಾಡಿದ್ದೆವು ಎಂದಿದ್ದಾರೆ.
ಇದು ಒಂದು ಅನಿರೀಕ್ಷಿತ ದುರಂತ. ಯಾರೂ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸರ್ಕಾರ ಪ್ರಾರ್ಥನೆ ಮಾಡುತ್ತದೆ. ಕೆಲವು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾರಸುದಾರರಿಗೆ ಪೋಷಕರಿಗೆ ಅವರ ಸಾವಿನ ದುಖ ಭರಿಸುವ ಶಕ್ತಿ ನೀಡಲಿ.ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ರು.
ಮೆಜೆಸ್ಟ್ರಿಯೇಟ್ ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದ ಅವರು ನಾನು ಇದರಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಭದ್ರತಾ ವೈಫಲ್ಯ ಇರಬಹುದು, ಏನೇ ಇದ್ದರೂ ತನಿಖೆ ಮಾಡುತ್ತೇವೆ. ಈ ಘಟನೆಯನ್ನು ನಾನು ಸಮರ್ಥಿಸುವುದಿಲ್ಲ. ರಾಜಕೀಯವನ್ನು ಮಾಡುವುದಿಲ್ಲ, ಮೆಜೆಸ್ಟಿ್ರಿಯೇಟ್ ತನಿಖೆಗೆ ೧೫ ದಿನ ನಿಗದಿಯಾಗಿದೆ ಎಂದ್ರು.