ಮನೆ Latest News ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದೆ; ಬೆಂಗಳೂರಿನಲ್ಲಿ ಬಿಜೆಪಿ...

ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ

0

ಬೆಂಗಳೂರು: ನಿನ್ನೆ ದೆಹಲಿಯಲ್ಲಿ ಸಿಎಂ ಅನುದಾನ ತಾರತಮ್ಯದ  ಆರೋಪ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಕೇಂದ್ರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ.ಸಿಎಂ ಅವರನ್ನು ನೋಡಿದರೆ ಪಾಪ ಅನ್ನಿಸುತ್ತದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗುತ್ತಿಲ್ಲ, ಅಭಿವೃದ್ಧಿ ಮಾಡಲು ಹಣ ಇಲ್ಲ. ನಿನ್ನೆ ದೆಹಲಿಯಲ್ಲಿ ಸಿಎಂ ಅರ್ಧ ಸತ್ಯ ಹೇಳಿದ್ದಾರೆ. ಸಿಎಂ ಆರೋಪಗಳು ಸತ್ಯವಲ್ಲ.ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಅಷ್ಟೇ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ಕೇಂದ್ರದ ಯೋಜನೆಗಳಿಗೂ ಕತ್ತರಿ ಹಾಕುತ್ತಿದೆ. ರಾಜ್ಯ ಸರ್ಕಾರದ ಆರೋಪಗಳು ಸತ್ಯವಲ್ಲ. ಹೊಸದಾಗಿ ಜಾತಿ ಜನಗಣತಿಗೆ ನಿರ್ಧಾರ ವಿಚಾರದ ಬಗ್ಗೆ ಮಾತನಾಡಿ ಮೊದಲಿಂದಲೂ ಜಾತಿ ಜನಗಣತಿ ಅವೈಜ್ಞಾನಿಕ, ಅವಾಸ್ತವ ಅಂತ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ಯಪಡಿಸಿದ್ದರು. ಸರ್ಕಾರಕ್ಕೆ ಈಗ ಜ್ಞಾನೋದಯ ಆಗಿದೆ. ಕಾಲ್ತುಳಿತ ದುರಂತ ಪ್ರಕರಣ ಡೈವರ್ಟ್ ಮಾಡಲು ಹೊಸದಾಗಿ ಸಮೀಕ್ಷೆ ಮಾಡುವ ಪ್ರಸ್ತಾಪ ಮಾಡಿದ್ದಾರೆ. ಅಂತಿಮವಾಗಿ ಈ ವಿಚಾರದಲ್ಲಿ ಇವರು ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಜನಗಣತಿ, ಜಾತಿ ಜನಗಣತಿ ಎರಡೂ ಮಾಡುತ್ತಿದೆ. ಇದು ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಗೊಂದಲ ಸೃಷ್ಟಿಸಲು ಹೊಸದಾಗಿ ಜಾತಿ ಜನಗಣತಿ ಪ್ರಸ್ತಾಪ ಮಾಡಿದ್ದಾರೆ. ಇವರಿಂದ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಆಗುವುದಿಲ್ಲ. ರಾಜ್ಯದಲ್ಲಿ ಗೊಂದಲ ಸೃಷ್ಟಿಗೆ ಮುಂದಾಗಿದ್ದಾರೆ ಅಷ್ಟೇ ಎಂದರು.

ಮಂಗಳೂರಿನಲ್ಲಿ ಕೋಮು ನಿಗ್ರಹ ದಳಕ್ಕೆ ಚಾಲನೆ ವಿಚಾರದ ಬಗ್ಗೆ ಮಾತನಾಡಿ ಇದು ಕೋಮು ನಿಗ್ರಹ ದಳ ಅಲ್ಲ. ಬಿಜೆಪಿ ಕಾರ್ಯಕರ್ತರನ್ನು ಹಿಂದೂಗಳನ್ನು ಬೆದರಿಸಲು ಇರುವ ಷಡ್ಯಂತ್ರ ಇದು. ಇದಕ್ಕೆಲ್ಲಾ ನಾವು ಬಗ್ಗುವುದಿಲ್ಲ. ಸಿದ್ದರಾಮಯ್ಯ ಸರ್ಕಾರದ ದಬ್ಬಾಳಿಕೆಗೆ ಹೆದರಲ್ಲ, ಎದುರಿಸುತ್ತೇವೆ ಎಂದು ತಿರುಗೇಟು ನೀಡಿದ್ರು.