ಮನೆ Latest News ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ; ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯ

ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ; ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯ

0

ನವದೆಹಲಿ: ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ರ್ಯಾಕ್ಸ್ ಹಾಕಬಹುದು ಎಂದು ನವದೆಹಲಿಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ವಂಗ್ಯವಾಡಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು ಯುಗಾದಿ,ರಂಜಾಬ್ ಒಟ್ಟಿಗೆ ಬಂತಲ್ಲ ಅದಕ್ಕೆ ಸರ್ಕಾರ ಬೆಲೆ ಏರಿಕೆ ಮಾಡಿದೆ. ಆಳ್ವಿಕೆ ಮಾಡಿದ 22 ತಿಂಗಳು ಅದರಲ್ಲಿ 18 ತಿಂಗಳು ಬೆಲೆ ಏರಿಕೆ ಸುದ್ದಿ ಕೇಳಿದ್ದೇವೆ. ಹಾಲಿನ ಬೆಲೆ, ಆಲ್ಕೋಹಾಲ್ ನಿಂದ ಎಲ್ಲ ಬೆಲೆ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಕೊಡ್ತಿವಿ ಅಂತೇಳಿ, ಹೇಳದೆ ಬೆಲೆ ಏರಿಕೆ ಮೂಲಕ ಬರೆ ಹಾಕಲಾಗುತ್ತಿದೆ. ಇದನ್ನು ಮುಂಚೆ ಹೇಳಿದ್ದರೆ 50 ಸೀಟು ಗೆಲ್ಲುತ್ತಿರಲಿಲ್ಲ. ಕಸ ಸಂಗ್ರಹಣೆಗೂ ಸೆಸ್ ವಿಧಿಸಲಾಗಿತ್ತಿದೆ. ಬ್ರ್ಯಾಂಡ್ ಬೆಂಗಳೂರು ಅಂತಾರೆ ಆದರೆ ಎಲ್ಲೂ ನೋಡಿದರೂ ಕಸದ ರಾಶಿ. ಜನರು ಶಾಪ ಹಾಕುತ್ತಿದ್ದಾರೆ. ಹಿಮಾಲಯದಲ್ಲಿ ಶೌಚಾಲಯಕ್ಕೂ ಟ್ರ್ಯಾಕ್ಸ್ ಹಾಕಿದ್ದರು.ಹಾಗೇ ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ರ್ಯಾಕ್ಸ್ ಹಾಕಬಹುದು ಎಂದಿದ್ದಾರೆ.

ನಾನು ಕೋರ್ಟ್ ಕೇಸ್ ನಿಮಿತ್ಯ ದೆಹಲಿಗೆ ಬಂದಿದ್ದೆ. ಹಾಗೆಯೇ ಬಿಜೆಪಿ ಕಚೇರಿಗೆ ಭೇಟಿ ಮಾಡಿ ಬಂದೆ. ಯತ್ನಾಳ್ ವಿಚಾರಕ್ಕೆ ಸಂಬಂಧ ಏನು ಮಾತನಾಡಲ್ಲ. ಎಲ್ಲವನ್ನು ಕಾಲಕ್ಕೆ ಬಿಡುತ್ತೇನೆ, ಈಗ ಏನ್ ಮಾಡಿದ್ರು ತಪ್ಪಾಗುತ್ತೆ. ಯತ್ನಾಳ್ ಹೊಸ ಪಕ್ಷ ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸಮಯ ಎಲ್ಲವನ್ನು ನಿರ್ಧಾರ ಮಾಡಲಿದೆ. ಬಿಜೆಪಿ, ಕಾಂಗ್ರೆಸ್ ಯಾರಿಗೆ ಎಫೆಕ್ಟ್ ಆಗುತ್ತೆ ಗೊತ್ತಿಲ್ಲ. ಹಿಂದೆಯೂ ಬಹಳ ಜನರು ಪಕ್ಷ ಸ್ಥಾಪಿಸಿದವರು ಯಶಸ್ವಿಯಾಗಿಲ್ಲ, ಡ್ಯಾಮೇಜ್ ಮಾಡಬಹುದು ಎಂದರು.

ಮೊಲ ಬೇಟೆ ವಿಚಾರದ ಬಗ್ಗೆ ಮಾತನಾಡಿದ ಅವರು  ಅರಣ್ಯ ಕಾಯ್ದೆ ಜನರಿಗೂ, ಮಂತ್ರಿಗಳಿಗೆ ಅನ್ವಯ ಆಗುತ್ತೆ.ಹಿಂದೆ ಪ್ರಭಾವಿ ರಾಜಕೀಯ ಮನೆಯಲ್ಲಿ ಅತಿಥಿಗಳಿಗೆ ಕಾಡು ಪ್ರಾಣಿ ಸಾಕಿ ಹತ್ಯೆ ಮಾಡಿ ಊಟಕ್ಕೆ ನೀಡಲಾಗಿತ್ತು. ಈ ವಿಷಯದಲ್ಲಿ ಸರ್ಕಾರ ಏನ್ ಮಾಡುತ್ತೆ ನೋಡೋಣ ಎಂದರು.

ಜೆಡಿಎಸ್ ನವರು ಅವರದ್ದೇ ಆದ ಬೇರೆ ಕಾರಣಕ್ಕೋಸ್ಕರ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು; ನಾಳೆ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಧರಣಿ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಜೀರ್ಣ ಆಗುವಷ್ಟು ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಾಗ ತುಘಲಕ್ ದರ್ಬಾರ್ ನಡೆಸಿ ಸಾಮಾನ್ಯ ಜನ ಜೀವಿಸಲು ಸಾಧ್ಯವಿಲ್ಲದಂತಹ ಸ್ಥಿತಿ‌ ನಿರ್ಮಾಣ ಮಾಡಿದ್ದು ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದಿದ್ದಾರೆ. ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ. ಉಳಿದ ಹಿಂದೂಗಳು ಏನು ದ್ರೋಹ ಮಾಡಿದ್ದಾರೆ?. ನಾವು ಮುಸ್ಲಿಮರ ವಿರೋಧಿಗಳಲ್ಲ. ಆದರೆ ಎಲ್ಲರನ್ನೂ ಸರಿ ಸಮನಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ.

ಹಾಲು, ವಿದ್ಯುತ್, ಮೆಟ್ರೋ, ನೋಂದಣಿ ವೆಚ್ಚ ಸೇರಿ ಎಲ್ಲಾ ದರ ಏರಿಕೆ ಮಾಡಿದ್ದಾರೆ. ದಿನಬಳಕೆಯ ವಸ್ತುಗಳನ್ನು ಕಾಂಗ್ರೆಸ್ ಸರ್ಕಾರ ಏರಿಸಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಬೆಲೆ ಏರಿಕೆ ಹಿಂಪಡೆಯಬೇಕು ಅಂತಾ ನಾವು ನಾಳೆ ಅಹೋ ರಾತ್ರಿ ಧರಣಿ ಮಾಡುತ್ತಿದ್ದೇವೆ. ನಾನೂ ಕೂಡಾ ಧರಣಿಯಲ್ಲಿ ಭಾಗವಹಿಸುತ್ತಿದ್ದೇನೆ. ಯಾರ್ಯಾರು ನೋವು ಅನುಭವಿಸುತ್ತಿದ್ದಾರೋ ಎಲ್ಲರೂ ಪಕ್ಷ ಬೇಧ ಮರೆತು ಬಂದು ಭಾಗವಹಿಸಿ. ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಅವರಿಗೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದೇ ಮುಖ್ಯ . ನಮ್ಮ ಹೋರಾಟ ಇನ್ನೂ ಅನೇಕ ದಿನ ನಡೆಯುವುದಿದೆ.ಜೆಡಿಎಸ್ ನವರು ಅವರದ್ದೇ ಆದ ಬೇರೆ ಕಾರಣಕ್ಕೋಸ್ಕರ ಹೋರಾಟದಲ್ಲಿ ಭಾಗವಹಿಸುತ್ತಿಲ್ಲ ಎಂದರು.