ಬೆಂಗಳೂರು; ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದ 21 ಜನರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು. ನಿಯೋಗದಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಸೋಮಲಿಂಗಪ್ಪ ಇದ್ದರು. ನಿಯೋಗವು ವಾಲ್ಮೀಕಿ ನಿಗಮದ ಅವ್ಯವಹಾರ ಸಂಬಂಧ ರಾಜ್ಯಪಾಲರಿಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿತು.
ದೂರು ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿರುವುದು ಮತ್ತು ಗ್ಯಾರಂಟಿ ಯೋಜನೆಗೆಳಿಗೆ ಎಸ್ ಸಿಇಪಿ, ಟಿಎಸ್ ಪಿ ಹಣ ದುರುಪಯೋಗ ಆಗಿದೆ ಅಂತಾ ದೂರು ಕೊಟ್ಟಿದ್ದೇವೆ.ಅರುಣ್ ಹಿರೇಹಾಳ್ ಚುನಾವಣೆಗಿಂತಲೂ ಮೊದಲೇ ದೂರು ದಾಖಲಿಸಿದ್ದರು.ಅದಕ್ಕೆ ಚುನಾವಣಾ ಆಯೋಗ ಸಮರ್ಪಕ ಉತ್ತರ ಕೊಟ್ಟಿಲ್ಲ.ಬಳ್ಳಾರಿ ಮತ್ತು ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದೇವೆ.ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಮತ್ತು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಶಾಸಕತ್ವ ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದೇವೆ.ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿ ಬಳಕೆಯಾಗಿದೆಯೋ ಆ ಎಲ್ಲಾ ಚುನಾವಣೆ ರದ್ದು ಮಾಡಬೇಕೆಂದು ಒತ್ತಾಯಿಸಿದ್ದೇವೆ.ವಾಲ್ಮೀಕಿ ಪ್ರಕರಣವನ್ನು ಕೋರ್ಟ್ ನಲ್ಲಿ ಚಾಲೆಂಜ್ ಮಾಡಬೇಕು ಅಂತಾ ಇದ್ದೇವೆ.ಪದೇ ಪದೇ ಪ್ರಕರಣವನ್ನು ನೆನಪಿಸಿಕೊಡಬೇಕು ಅಂತಾ ನಾವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ.ಎಂದರು.
ನಿಯೋಗದಲ್ಲಿ ಮಾಜಿ ಸಂಸದರಾದ ಜಿ.ಎಂ. ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಶಾಸಕ ಎಂ. ಚಂದ್ರಪ್ಪ, ಮಾಜಿ ಸಚಿವ ಶ್ರೀಮಂತ ಪಾಟೀಲ್, ಅರಸೀಕರೆ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಎನ್.ಆರ್. ಸಂತೋಷ್, ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಹಿರೇಹಾಳ್ ಕೂಡ ಉಪಸ್ಥಿತರಿದ್ದರು.
ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರ ಭೇಟಿ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ಇದು ಪೂರ್ವ ನಿಗದಿತ ಕಾರ್ಯಕ್ರಮ ಆಗಿತ್ತು.ನಿನ್ನೆಯ ಸಭೆಯಲ್ಲಿ ಪಕ್ಷದ ನಿರ್ಣಯಕ್ಕೆ ಬದ್ಧರಿದ್ದೇವೆ ಎಂದಿದ್ದೇವೆ.ರಾಜ್ಯಪಾಲರ ಅಪಾಯಿಂಟ್ ಮೆಂಟ್ ಮೊದಲೇ ತೆಗದುಕೊಂಡಿದ್ದೆವು, ಅದಕ್ಕೆ ಇಂದು ಬಂದಿದ್ದೇವೆ.ಯಾವುದೇ ಗೊಂದಲ ಇಲ್ಲ, ಭಿನ್ನಮತ ಇಲ್ಲ ಎಂದಿದ್ದಾರೆ. ಇನ್ನು ನಿಯೋಗದಲ್ಲಿ ಬಿಜೆಪಿಯ ಉಳಿದ ನಾಯಕರು ಇಂದು ಬರದಿರುವ ವಿಚಾರಕ್ಕೆ ರಿಯ್ಯಾಕ್ಟ್ ಮಾಡಿದ ಅವರು ಯಾವುದೇ ರೀತಿಯ ನಾಯಕತ್ವದ ಪ್ರಶ್ನೆ ಇಲ್ಲಿ ಉದ್ಭವ ಆಗುವುದಿಲ್ಲ.ಪ್ರಭಾವಿ ಉಪಾಧ್ಯಕ್ಷ ಅಂದರೆ ಯಾರು ಹೇಳಿ ನೋಡೋಣ.ಒಬ್ಬ ಸಾಮಾನ್ಯ ಕಾರ್ಯಕರ್ತ ಬಂದರೂ ಅದು ಬಿಜೆಪಿ ಬಂದ ಹಾಗೆ.ಎಸ್ ಸಿಇಪಿ-ಟಿಎಸ್ ಪಿ ಜನರಲ್ ಫಂಡ್ ನಲ್ಲಿ ಹೋಗಿರುವುದರಿಂದ ಅದು ಕ್ರಿಮಿನಲ್ ಅಪರಾಧ ಆಗುತ್ತದೆ.ರಾಜ್ಯಪಾಲರು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.