ಮನೆ Latest News ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ವಿಜಯಲಕ್ಷ್ಮೀ ದರ್ಶನ್ ಫಸ್ಟ್ ರಿಯಾಕ್ಷನ್ ; ರೇಣುಕಾಸ್ವಾಮಿ ಸಾವಿಗೆ ...

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ವಿಜಯಲಕ್ಷ್ಮೀ ದರ್ಶನ್ ಫಸ್ಟ್ ರಿಯಾಕ್ಷನ್ ; ರೇಣುಕಾಸ್ವಾಮಿ ಸಾವಿಗೆ ಸಂತಾಪ

0

ಬೆಂಗಳೂರು; ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ದರ್ಶನ್ ಪುತ್ರ ವಿನೀಶ್ ಸೋಷಿಯಲ್ ಮೀಡಿಯಾದಲ್ಲಿ ಅಪ್ಪನ ಪರವಾಗಿ ಪೋಸ್ಟ್ ಹಾಕಿದ್ದು ಬಿಟ್ರೆ ಅವರ ಪತ್ನಿ, ತಾಯಿ, ಸಹೋದರ ಯಾರೂ ಕೂಡ ರಿಯ್ಯಾಕ್ಟ್ ಮಾಡಿರಲಿಲ್ಲ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಧರ್ಮಪತ್ನಿ ವಿಜಯಲಕ್ಷ್ನೀ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಮಾತನಾಡಿದ್ದಾರೆ.

 

ಘಟನೆಯ ಬಳಿಕ ವಿಜಯಲಕ್ಷ್ಮೀ ತಮ್ಮ ಇನ್ಸ್ಟಾ ಖಾತೆಯ ಡಿಪಿ ತೆಗೆದು ಹಾಕಿದ್ದರು, ಅಲ್ಲದೇ ದರ್ಶನ್ ಸೇರಿದಂತೆ ಎಲ್ಲರನ್ನೂ ಅನ್ ಫಾಲೋ ಮಾಡಿದ್ದರು. ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದರು. ಆದರೆ ಇಂದು ಪೋಸ್ಟ್ ಒಂದನ್ನು ಹಾಕಿರುವ ಅವರು ಘಟನೆ ಬಗ್ಗೆ ರಿಯ್ಯಾಕ್ಟ್ ಮಾಡಿದ್ದಾರೆ.

ಹಾಗಾದ್ರೆ ಅವರ ಪೋಸ್ಟ್ ನಲ್ಲಿ ಏನಿದೆ ನೋಡೋಣ…

ಮೊದಲಿಗೆ, ಶ್ರೀ. ರೇಣುಕಾಸ್ವಾಮಿ ಅವರ ಕುಟುಂಬಸ್ತರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ.

ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ, ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧೀಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ.ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ.ಸತ್ಯಮೇವ ಜಯತೆ

ಹೀಗಂಥಾ ವಿಜಯಲಕ್ಷ್ಮೀ ಬರೆದುಕೊಂಡಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಕೋರ್ಟ್ ನಿಂದ ಪಡೆದಿರುವ ಆದೇಶ ಪ್ರತಿಯನ್ನು ಕೂಡ ಅವರು ಶೇರ್ ಮಾಡಿದ್ದಾರೆ.

ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವಿಜಯಲಕ್ಷ್ಮೀ ಭೇಟಿ

ಇನ್ನು ಇಂದು ದರ್ಶನ್ ಅವರು ಪೊಲೀಸ್ ಕಸ್ಟಡಿಯಲ್ಲಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವಿಜಯಲಕ್ಷ್ಮೀ ವಿಚಾರಣೆಗಾಗಿ ಬಂದಿದ್ದರು ಕೊಲೆ ನಡೆದ ದಿನ ದರ್ಶನ್ ಅವರು ಧರಿಸಿದ್ದ ಶೂ ವಿಜಯಲಕ್ಷ್ಮೀ ಅವರ ಮನೆಯಲ್ಲಿ ಪತ್ತೆಯಾಗಿತ್ತು.ಹಾಗಾಗಿ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಪೊಲೀಸರು ಸೂಚಿಸಿದ್ದರು. ಹಾಗಾಗಿ ವಿಜಯಲಕ್ಷ್ಮೀ ಹೇಳಿಕೆ ನೀಡೋದಕ್ಕಾಗಿ ಠಾಣೆಗೆ ಬಂದಿದ್ದರು ಎನ್ನಲಾಗಿದೆ.

ಕೊಲೆ ನಡೆದ ಮರುದಿನ ಬೆಳಗ್ಗೆ ದರ್ಶನ್ ಸೀದಾ ತಮ್ಮ ಮನೆಗೆ ಹೋಗಿ ಅಲ್ಲಿ ಬಟ್ಟೆ ಬದಲಾಯಿಸಿ ಅಲ್ಲಿಂದ ವಿಜಯಲಕ್ಷ್ಮೀ ಅವರ ಬನಶಂಕರಿಯಲ್ಲಿರುವ ನಿವಾಸದ ನವೀಕರಣವಾಗಿ ಪೂಜೆ ಕಾರ್ಯಕ್ರಮ ಇದ್ದದ್ದರಿಂದ ಅದರಲ್ಲಿ ಭಾಗಿಯಾಗಲು ತೆರಳಿದ್ದರು. ಆಗ ರೇಣುಕಾಸ್ವಾಮಿ ಕೊಲೆಯಾದ ದಿನ ಧರಿಸಿದ್ದ ಶೂ ಅನ್ನೇ ಧರಿಸಿ ದರ್ಶನ್ ಹೋಗಿದ್ದರು. ಆ ಶೂ ಅನ್ನು ಅಲ್ಲೇ ಬಿಟ್ಟಿದ್ದರು. ಇದನ್ನು ತಮ್ಮ ಮನೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ ವೇಳೆ ದರ್ಶನ್ ಪೊಲೀಸರಿಗೆ ಹೇಳಿದ್ದರು. ಹಾಗಾಗಿ ಈ ಬಗ್ಗೆ ವಿಚಾರಣೆಗಾಗಿ ಅವರಿಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ಆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಘಟನೆಗೆ ಸಂಬಂಧಿಸಿದಂತೆ ರಿಯ್ಯಾಕ್ಟ್ ಮಾಡಿದ್ದಾರೆ.