ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ದಾಸ ದರ್ಶನ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ ಬೆನ್ನಲ್ಲೇ ಫುಲ್ ಟೆನ್ಶನ್ ನಲ್ಲಿದ್ದಾರೆ ಎನ್ನಲಾಗಿದೆ. ಮೊನ್ನೆ ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಪತ್ನಿ ಹಾಗೂ ಸಹೋದರ ದಿನಕರ್ ತೂಗುದೀಪ್ ದರ್ಶನ್ ಅವರನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ಮೊನ್ನೆ ದರ್ಶನ್ ಪತ್ನಿಗೆ ಕರೆ ಮಾಡಿ 5 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿದೆ.
ತುರ್ತು ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕರೆ ಮಾಡಿದ ದರ್ಶನ್ ಪತ್ನಿಯೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದ್ದರು. ಅಲ್ಲದೇ ನಾಳೆ ಅಂದರೆ ನಿನ್ನೆ ಭೇಟಿಗೆ ಬಳ್ಳಾರಿ ಜೈಲಿಗೆ ಬರುವಂತೆ ತಿಳಿಸಿದ್ದರು ಎನ್ನಲಾಗಿದೆ. ಅಲ್ಲದೇ ದರ್ಶನ್ ತೀವ್ರ ಭಾವುಕರಾಗಿದ್ದರು ಎನ್ನಲಾಗಿದೆ. ಇನ್ನು ಪತಿ ಭಾವುಕರಾಗಿದ್ದು ನೋಡಿ ಬೇಸರಗೊಂಡ ವಿಜಯಲಕ್ಷ್ಮೀ ಅತ್ತೆ ಮೀನಾ ತೂಗುದೀಪ ಅವರೊಂದಿಗೆ ಜೈಲಿಗೆ ಬರೋದಾಗಿ ತಿಳಿಸಿದ್ದರು.ಆದರೆ ಇಂದಿಗೆ ದರ್ಶನ್ ನ್ಯಾಯಾಂಗ ಬಂಧನ ಅಂತ್ಯವಾಗುವ ಹಿನ್ನೆಲೆ ಕೋರ್ಟ್ ಕಲಾಪಯಿದೆ ಎಂದು ಅವರ ಭೇಟಿಯನ್ನು ರದ್ದುಗೊಳಿಸಲಾಗಿತ್ತು. ಅದರಂತೆ ವಿಜಿ ದರ್ಶನ್ ದರ್ಶನ್ ಪರ ವಕೀಲರೊಂದಿಗೆ ಜೈಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಜಾಮೀನಿಗೆ ಅರ್ಜಿ ಸಲ್ಲಿಸುವ ಬಗ್ಗೆ ವಕೀಲರೊಂದಿಗೆ ದರ್ಶನ್ ಮಾತನಾಡಲಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ವಿರುದ್ಧ ಡಿ ಗ್ಯಾಂಗ್ ಮೆರೆದ ಕ್ರೌರ್ಯದ ಇಂಚಿಂಚೂ ಅನಾವರಣ;ರೇಣುಕಾಸ್ವಾಮಿ ಬಿಟ್ ಬಿಡಿ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪಟ್ಟಂತೆ ನಿನ್ನೆ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಡಿ ಗ್ಯಾಂಗ್ ರೇಣುಕಾಸ್ವಾಮಿಯನ್ನು ಯಾವ ರೀತಿ ಕೊಲೆ ಮಾಡಿದೆ ಎಂಬ ಇಂಚಿಂಚೂ ಮಾಹಿತಿ ಕೂಡ ಅನಾವರಣವಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಡಿ ಗ್ಯಾಂಗ್ ಯಾವ ರೀತಿ ಹಲ್ಲೆ ಮಾಡಿ ಕೊಲೆ ಮಾಡಿತು ಅನ್ನೋದಕ್ಕೆ ಸಂಬಂಧಪಟ್ಟಂತೆ ಫೋಟೋ ರಿವೀಲ್ ಆಗಿದೆ. ಗಡ್ಡಿ ಮನುಷ್ಯನಂತಿದ್ದ ರೇಣುಕಾಸ್ವಾಮಿ ಬಿಟ್ ಬಿಡಿ ನನ್ನ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ನೋಡಿದ್ರೇನೆ ಗೊತ್ತಾಗುತ್ತೆ. ಡಿ ಗ್ಯಾಂಗ್ ಯಾವ ರೀತಿ ಚಿತ್ರಹಿಂಸೆ ನೀಡಿ ಆತನನ್ನು ಕೊಲೆ ಮಾಡಿದೆ ಅಂತಾ.
ಈಗಾಗಲೇ ಪೊಲೀಸರು ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಪವಿತ್ರ ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಪವಿತ್ರಾಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದಕ್ಕಾಗಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಪ್ರೂವರ್ ಆಗಲು ಒಪ್ಪಿಕೊಂಡ ಆರೋಪಿಗಳಲ್ಲಿ ಒಬ್ಬ ನೀಡಿರುವ ಹೇಳಿಕೆಯನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ದರ್ಶನ್ ಮತ್ತು ಇತರೆ ಆರೋಪಿಗಳ ಪಾತ್ರದ ಬಗ್ಗೆ ಚಾರ್ಚ್ ಶೀಟ್ ನಲ್ಲಿ ವಿವರಿಸಲಾಗಿದೆ.