ಮನೆ ಪ್ರಸ್ತುತ ವಿದ್ಯಮಾನ ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾರ; ರೈತರ ಪರ ನಿಂತ್ರೆ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ...

ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾರ; ರೈತರ ಪರ ನಿಂತ್ರೆ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

0

ಬೆಂಗಳೂರು; ವಕ್ಫ್ ಆಸ್ತಿ ನೋಂದಣಿ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು ರೈತರ ಪರ ನಿಂತ್ರೆ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾವು ರೈತರ ಪರ ನಿಂತರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ.ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟುವ, ದೇಶವನ್ನು ಜಾತಿ, ಧರ್ಮ ಆಧಾರದಲ್ಲಿ ಒಡೆಯುವ ಕೆಲಸ ಹಿಂದಿನಿಂದಲೂ ಕಾಂಗ್ರೆಸ್ ಮಾಡುತ್ತಿದೆ.ಇಂದು ಜಮೀರ್ ಅಹಮದ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.ರೈತರ ಅನ್ಯಾಯ ಮಾಡುವ ಕೆಲಸ ಜಮೀರ್ ಅಹಮದ್ ನೇತೃತ್ವದಲ್ಲಿ ಆಗುತ್ತಿದೆ ಎಂದರು.

ರೈತರಿಗೆ ನೋಟೀಸ್ ಕೊಟ್ಟಿರುವುದಕ್ಕೆ ಬಿಜೆಪಿ ಕಾರಣವೇ?ರೈತರ ಪರ ಬಿಜೆಪಿ ಗಟ್ಟಿಯಾಗಿ ನಿಂತುಕೊಳ್ಳಲಿಲ್ಲ ಅಂದರೆ ರೈತರನ್ನು ಬೀದಿಗೆ ತರುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿತ್ತು.ಈಗ ನೋಡಿದರೆ ಟಾಸ್ಕ್ ಫೋರ್ಸ್ ಮಾಡಿದ್ದೇವೆ ಅಂತಾ ಆಟ ಶುರು ಮಾಡಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ.ನಾವು ಕಾನೂನು ಸಹಾಯ ಸೇರಿದಂತೆ ರೈತರ ಪರ ನಿಲ್ಲುತ್ತೇವೆ ಎಂದಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ಹಿನ್ನೆಲೆ; ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆ

ಬೆಂಗಳೂರು; ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ಹಿನ್ನೆಲೆ  ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆಯಾಗಿದೆ.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಹಿನ್ನೆಲೆಯಲ್ಲಿ ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಸದ ರಮೇಶ್ ಜಿಗಜಿಣಗಿ ಮತ್ತು ಶಾಸಕ ಯತ್ನಾಳ್ ಸೇರ್ಪಡೆಗೊಳಿಸಿ ತಂಡ ಪುನರ್ ರಚಿಸಿದೆ. ಸಂಸದ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ತಂಡ ನಾಳೆ ವಿಜಯಪುರ ಜಿಲ್ಲೆಗೆ ತೆರಳಲಿದೆ.ಇಂದು ತಂಡಕ್ಕೆ ಸಂಸದ ಜಿಗಜಿಣಗಿ, ಶಾಸಕ ಯತ್ನಾಳ್ ಮತ್ತು ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ. ಜಿರಲಿ ಸೇರ್ಪಡೆಯಾಗಿದ್ದಾರೆ.

ಇಂದು ಮಧ್ಯಾಹ್ನ ಬಿಜೆಪಿ ತಂಡವನ್ನು ಬಹಿಷ್ಕರಿಸುವುದಾಗಿ ಯತ್ನಾಳ್ ಹೇಳಿಕೆ ನೀಡಿದ್ದರು.ಯತ್ನಾಳ್ ಆಕ್ರೋಶದ ಬೆನ್ನಲ್ಲೇ ರಾಜ್ಯಾಧ್ಯಕ್ಷರಿಂದ ತಂಡ ಪುನರ್ ರಚನೆಯಾಗಿದೆ.

ನಿನ್ನೆ ಸಂಸದ ಕಾರಜೋಳ ನೇತೃತ್ವದಲ್ಲಿ ಶಾಸಕರಾದ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ಎಂಎಲ್ಸಿ ಅರುಣ್ ಶಹಾಪುರ ಮತ್ತು ರೈತ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರನ್ನೊಳಗೊಂಡ ತಂಡ ರಚಿಸಿದ್ದ ಬಿಜೆಪಿ ಇಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶದ ಹಿನ್ನೆಲೆಯಲ್ಲಿ ಬಿಜೆಪಿ ಪರಿಶೀಲನಾ ತಂಡ ಪುನರ್ ರಚನೆ ಮಾಡಿದೆ.