ಮನೆ Latest News ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಬಂಡತನ ಬಿಟ್ಟಿಲ್ಲ ; ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌...

ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಬಂಡತನ ಬಿಟ್ಟಿಲ್ಲ ; ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಹೇಳಿಕೆ

0

ಶಿವಮೊಗ್ಗ; ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರೋದುನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ನಿನ್ನೆ ವಜಾಗೊಂಡಿದೆ. ಈ ಬಗ್ಗೆ ಇಂದು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನಿನ್ನೆ ಮುಡಾ ವಿಚಾರದಲ್ಲಿ ಹೈಕೋರ್ಟ್ ತೀರ್ಪು ನೀಡಿದೆ.ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರೋದು ಸರಿ ಇದೆ ಅಂತ ಕೋರ್ಟ್ ಹೇಳಿದೆ.ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಬಂಡತನ ಬಿಟ್ಟಿಲ್ಲ.ರಾಜಭವನವನ್ನು ದುರುಪಯೋಗ ಮಾಡಿಕೊಳ್ತಿದ್ದಾರೆ ಅಂತ ಮತ್ತೆ ಸಿಎಂ ಹೇಳಿದ್ದಾರೆ.ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಅಂತ ಹೇಳಿದ್ದಾರೆ.ಹೈಕೋರ್ಟ್ ಆದೇಶ ಇದ್ದರೂ ಇದು ರಾಜಕೀಯ ಪ್ರೇರಿತ ಅಂತ ಮತ್ತೆ ಹೇಳಿದ್ದಾರೆ.ಹೈಕೋರ್ಟ್ ತೀರ್ಪಿಗೆ ನೀವು ಗೌರವ ಕೊಡಬೇಕು.ನಿಮ್ಮ ಕುಟುಂಬದ ಮೇಲೆ ಆರೋಪ ಬಂದಿರೋದ್ರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದಿದ್ದಾರೆ.

ನಿನ್ನೆ ಸಿಎಂ ಪತ್ರಿಕಾಗೋಷ್ಠಿ ಮಾಡಿದ್ದಾರೆ.ನಾನು ರಾಜೀನಾಮೆ ನೀಡಲ್ಲ ಎಂದು ಸಿಎಂ ಹೇಳುವಾಗ ಪಕ್ಕದಲ್ಲೇ ಇದ್ದ ಡಿ‌.ಕೆ. ಶಿವಕುಮಾರ್ ಗಂಭೀರವಾಗಿ ಕುಳಿತಿದ್ದರು.ಅವರು ಕುಳಿತಿದ್ದ ರೀತಿ ಹೇಗಿತ್ತು ಎಂದರೆ, ನೀವು ಹೇಗೆ ರಾಜೀನಾಮೆ ಕೊಡಲ್ಲ ನಾನೂ ನೋಡ್ತೇನೆ ಎನ್ನುವ ಶೈಲಿಯಲ್ಲಿ ಇತ್ತು ಎಂದು ವ್ಯಂಗ್ಯ ಮಾಡಿದ್ದಾರೆ.

ಇನ್ನು ಬಿಜೆಪಿ ನಾಯಕರಿಂದ ಈಶ್ವರಪ್ಪ ಭೇಟಿ ವಿಚಾರಕ್ಕೆ ರಿಯ್ಯಾಕ್ಟ್ ಮಾಡಿದ ಅವರು ಯತ್ನಾಳ್ ಮತ್ತೆ ಯಾರು ಯಾರು ಹೋಗಿದ್ದರು ಗೊತ್ತಿಲ್ಲ, ಅವರನ್ನೇ ಕೇಳಿ.ನಾನು ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡಬಾರದು ಅಂದುಕೊಂಡಿದ್ದೆ.ಬಹಳ ಕಾಳಜಿ ಇಟ್ಟುಕೊಂಡು ಬಿಜೆಪಿ ಪರವಾಗಿ ಮಾತನಾಡಿದ್ದಾರೆ ಈಶ್ವರಪ್ಪ.ನಾವು ವಿಜಯೇಂದ್ರ‌ ನಾಯಕತ್ವ ಒಪ್ಪಲ್ಲ ಅಂತ ಹೇಳಿದ್ದಾರೆ.ಪಕ್ಷ ವಿರೋಧಿ ಚಟುವಟಿಕೆ ಮಾಡಿರೋದ್ರಿಂದ ಅವರ ಉಚ್ಚಾಟನೆ ಆಗಿದೆ.ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ರು ಈಶ್ವರಪ್ಪ.ಪಕ್ಷಕ್ಕಾಗಿ ಸ್ಪರ್ಧೆ ಮಾಡಲಿಲ್ಲ, ಮಗನಿಗಾಗಿ ಆ ರೀತಿ ಮಾಡಿದ್ರು.ಶಿವಮೊಗ್ಗದಲ್ಲಿ ಠೇವಣಿ ತೆಗೆದುಕೊಂಡಿಲ್ಲ ಅಂತ ನೋವು ಕಾಡ್ತಿದೆ ನನಗೆ ಆ ರೀತಿ ಆಗಬಾರದು.ಈಶ್ವರಪ್ಪ ಕರೆತರುವ ಯಾವುದೇ ಪ್ರಯತ್ನ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿಲ್ಲ.ಒಂದು ವೇಳೆ ರಾಷ್ಟ್ರ ನಾಯಕರು ಕೇಳಿದರೂ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

ಬಿಜೆಪಿಯಲ್ಲಿ ಒಗ್ಗಟ್ಟು ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಒಗ್ಗಟ್ಟಿನಿಂದಲೇ ಪಾದಯಾತ್ರೆ ಮಾಡಿದ್ದು.ಪಾದಯಾತ್ರೆ ಯಶಸ್ವಿಯಾಗಿದೆ, ಕೋರ್ಟ್ ತನಿಖೆಗೆ ಅನುಮತಿ ಕೊಟ್ಟಿದೆ ಎಂದಿದ್ದಾರೆ.

ಸಿಎಂ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ;  ಆದಿಚುಂಚನಗಿರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ.

ಮಂಡ್ಯ;  ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು  ಆದಿಚುಂಚನಗಿರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ನನ್ನ ಯಾವುದೇ ತೀರ್ಮಾನ ಆಗದೇ ಇದ್ರು ನನ್ನ ಆರೋಪಿ ಮಾಡ್ತಾ ಇದ್ದಾರೆ.ನನ್ನ ಮೇಲಿನ ಆರೋಪ ಎಲ್ಲಾ ಮುಗಿಲಿ.ಅದೇಲ್ಲಾ ಮುಗಿದ ಮೇಲೆ ಮಾತಾಡ್ತೀನಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರು ಪಾದಯಾತ್ರೆಗೆ ನಾನು‌ ಹೋಗಿದ್ದೆ. ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ.ಇವರ ಬಗ್ಗೆ ನಾನೇನು ಮಾತಾಡಿಲ್ಲ.ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ.ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ ಎಂದಿದ್ದಾರೆ.

ದೇಶದ ಕಾನೂನನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ.ಕಾನೂನು ಬಾಹಿರ ಚಟುವಟಿಕೆ ಮಾಡಿದ್ರೆ ಏನು ತೀರ್ಪು ಬೇಕು ಅದು ಕೊಡ್ತಾರೆ.ಕಾನೂನಿನ ಒಳಗೆ ಇದ್ದರೆ ಏನು ಬೇಕಾದ್ರು ಆಗಬಹುದು.ನಾನು ಸಿದ್ದರಾಮಯ್ಯ ಅವರಿಗೆ ಏನು ಹೇಳಲ್ಲ.ನನ್ನ ಅಭಿಪ್ರಾಯ ನಾನು ಹೇಳಲ್ಲ.ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ.ನನ್ನ ನೈತಿಕತೆ ಏನು ಅನ್ನೊದು ಕ್ಲೀಯರ್ ಆಗಬೇಕು.ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ.ಅದೆಲ್ಲಾ ಕ್ಲಿಯರ್ ಆದ ಬಳಿಕ ಮಾತಾಡ್ತೀನಿ.ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದ್ರೆ ನಾನು‌ ಹೇಳೊಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

ನನ್ನ ಇಕ್ಕಟ್ಟಿಗೆ ಸಿಲುಕಿಸಲು ಹೋಗಿದ್ದಾರೆ.ನಾನು ಹೆದರುವವನಲ್ಲ.ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡೋನು ನಾನು.ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ.ನನ್ನ ಮೇಲೆ ಷಡ್ಯಂತ್ರ ನಡೆಯುತ್ತಿರೋ ಬಗ್ಗೆ ಇನ್ನೂ ಅನುಮಾನ ಇದ್ಯಾ.ನಾನು ಇದನ್ನು ಷಡ್ಯಂತ್ರ ಅನ್ನಲ್ಲಾ, ಕುಮಾರಸ್ವಾಮಿ ಕೇಂದ್ರ ಸಚಿವನಾಗಿರೋದನ್ನು‌ ಸಹಿಸುತ್ತಿಲ್ಲ. ಜನರ ಮಧ್ಯ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡ್ತಾ ಇದ್ದಾರೆ.ಯಾವ ಮಂತ್ರಿ ಬಿಡಾಡಿಗಳು ಏನು ಮಾಡೋಕೆ ಆಗಲ್ಲ.ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.