ಮನೆ Latest News ಕಾಶ್ಮೀರ ಘಟನೆಯ ಬಳಿಕ ನಾವು ತುಂಬಾ ಅಲರ್ಟ್ ಆಗಿದ್ದೇವೆ; ಗೃಹ ಸಚಿವ ಡಾ ಜಿ ಪರಮೇಶ್ವರ್...

ಕಾಶ್ಮೀರ ಘಟನೆಯ ಬಳಿಕ ನಾವು ತುಂಬಾ ಅಲರ್ಟ್ ಆಗಿದ್ದೇವೆ; ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ

0

ಬೆಂಗಳೂರು: ಕಾಶ್ಮೀರ ಘಟನೆಯ ಬಳಿಕ ನಾವು ತುಂಬಾ ಅಲರ್ಟ್ ಆಗಿದ್ದೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪಾಕ್ ಪ್ರಜೆ ವಿಚಾರದ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಪಾಕ್ ಪ್ರಜೆಗಳ ಬಗ್ಗೆ ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದಾರೆ, ಎಲ್ಲಾ ಎಸ್ ಪಿಗೆ ಮಾಹಿತಿ ನೀಡಿದ್ದೇವೆ. ಸೀನಿಯರ್ ಆಫೀಸರ್ ಗೆ ತಿಳಿಸಿದ್ದೇವೆ. ಹೋಮ್‌ ಅಡ್ವೇಸರಿಯಿಂದ ಸೂಚನೆ ಬಂದಿದೆ. ಒಂದು ಟೈಮ್ ವೀಸಾ ಇದ್ದವರಿಗೆ ಕ್ರಮ ತೆಗೆದುಕೊಂಡಿದ್ದೇವೆ. ಪ್ರತೀ ಜಿಲ್ಲೆಯ ಎಸ್ ಪಿಗೆ ತಿಳಿಸಿದ್ದೇವೆ. ವಿದ್ಯಾರ್ಥಿ ಇದ್ದವರಿಗೂ ಕಳಿಸಬೇಕು. ಅಲರ್ಟ್ ಆಗಿದ್ದೇವೆ, ಘಟನೆ ಆದ್ಮೇಲೆ ಅಲರ್ಟ್ ಆಗಿದ್ದೇವೆ ಎಂದರು.

ಮೋದಿ ರಾಜೀನಾಮೆಗೆ ಅಗ್ರಹ ವಿಚಾರದ ಬಗ್ಗೆ ಮಾತನಾಡಿದ ಅವರು ಯಾರು ಕೇಳಿದ್ದಾರೆ ಗೊತ್ತಿಲ್ಲ. ಯಾರು‌‌ ಕೇಳಿದ್ದಾರೆ ಎಂದು ಮರು ಪ್ರಶ್ನೆ ಮಾಡಿದ್ದಾರೆ ಪರಮೇಶ್ವರ್.  ದೇಶದಲ್ಲೂ ಅಲರ್ಟ್ ಆಗಿದ್ದೇವೆ. ಇಲ್ಲೂ ಅಲರ್ಟ್ ಆಗಿ ಇದ್ದೇವೆ ಎಂದು ತಿಳಿಸಿದ್ರು.

ಕಲಬುರಗಿ ಯಲ್ಲಿ ಕಳ್ಳರ ಮೇಲೆ‌ ಫೈರಿಂಗ್ ವಿಚಾರದ ಬಗ್ಗೆ ಮಾತನಾಡಿದ ಅವರು  ಕಲಬುರಗಿ ಯಲ್ಲಿ ಎಟಿಎಂ ದರೋಡೆ ಮಾಡಲು ಬಂದವರ ಮೇಲೆ‌ ಫೈರಿಂಗ್ ಮಾಡಿದ್ದಾರೆ. ತನಿಖೆ ಮಾಡಿ ಎಲ್ಲಿಂದ ಬಂದಿದ್ದಾರೆ. ಕರ್ನಾಟಕದಲ್ಲೂ ಮಾಡಿದ್ದಾರೆ, ಹೊರ ರಾಜ್ಯದಲ್ಲಿ ಕಳ್ಳತನ ಮಾಡಿದ್ಸಾರೆ ತಮಗೆ ತಿಳಿಸುತ್ತೇವೆ. ಹೊರ ರಾಜ್ಯ ದಲ್ಲಿ ಗ್ಯಾಂಗ್ ಮಾಡಿದ್ದಾರೆ. ಅವರದ್ದೇ ಗಾಡಿ ತೆಗೆದುಕೊಂಡು ಬರ್ತಾರೆ. ಕೆಲವರು ಇಲ್ಲೇ ಲೋಕಲ್‌ ಜನರನ್ನೂ ಸೇರಿಸಿಕೊಳ್ತಾರೆ. ಹಿಂದೆ ತಮಿಳುನಾಡಿವರನ್ನೂ ಕರೆದುಕೊಂಡಿದ್ದಾರೆ. ಕಳ್ಳರನ್ನ ಹಿಡಿದಿರುವ ಪೊಲೀಸರಿಗೆ ಅಭಿನಂದನೆ ತಿಳಿಸುತ್ತೇನೆ. ಇನ್ನೂ ತನಿಖೆ ಆಗಬೇಕು.  ನಿನ್ನೆ ಲಿಂಗಾಯತ, ಒಕ್ಕಲಿಗ ಮೀಟಿಂಗ್  ಬಗ್ಗೆ ಗೊತ್ತಿಲ್ಲ. ಅವರು ಏನೂ ಚರ್ಚೆ ಮಾಡಿದ್ದಾರೆ ಗೊತ್ತಿಲ್ಲ.ಅವರು ಇನ್ನೂ ಯಾವುದೇ ಹೇಳಿಕೆ ಕೊಟ್ಟಿಲ್ಲ ಎಂದು ತಿಳಿಸಿದ್ರು.

ರನ್ಯಾ ರಾವ್ ತನಿಖೆ ಪ್ರಕರಣದ ಬಗ್ಗೆ ಮಾತನಾಡಿ ಇನ್ನೂ ಅದರ ಬಗ್ಗೆ ವರದಿ ನಮಗೆ ಬಂದಿಲ್ಲ. ಸಿಎಸ್ ಅವರಿಗೆ ವರದಿ ಕೊಟ್ಟಿದ್ದಾರೆ. ತನಿಖೆ ನಡೀತಿದೆ ಎಂದರು.

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳುತ್ತೇವೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಅವರನ್ನು ಮರಳಿ ಪಾಕಿಸ್ತಾನಕ್ಕೆ ಕಳುಹಿಸುವ ನಿಟ್ಟಿನಲ್ಲಿ  ಬಗ್ಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ  ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಾಗುತ್ತಿದೆ. ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು. ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ಇನ್ನು ಇದೇ ವೇಳೆ ಮಾತನಾಡಿದ ಅವರು ನಾವು ಯುದ್ಧದ ಪರ ಇಲ್ಲ. ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ರು.

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿತ್ತು.  ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು ಎಂದರು.