ಮನೆ Latest News ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗ್ತಾರಾ ವಿಜಯಲಕ್ಷ್ಮೀ ದರ್ಶನ್?

ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗ್ತಾರಾ ವಿಜಯಲಕ್ಷ್ಮೀ ದರ್ಶನ್?

0

ಬೆಂಗಳೂರು; ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮ್ಮ ಪತಿ ದರ್ಶನ್ ತೂಗುದೀಪ ಅವರನ್ನು ಹೇಗಾದ್ರೂ ಮಾಡಿ ಜೈಲಿನಿಂದ ರಿಲೀಸ್ ಮಾಡಿಸಬೇಕು ಅವರಿಗೆ ಬೇಲ್ ಕೊಡಿಸಬೇಕು ಎಂಬಲ್ಲಿ ನಿಟ್ಟಿನಲ್ಲಿ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಇತ್ತ ಮಗನ ಭವಿಷ್ಯದ ಬಗ್ಗೆಯೂ ಚಿಂತೆ ಅವರನ್ನು ಕಾಡುತ್ತಿದೆ.

ನಿನ್ನೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಮಗನನ್ನು ಡಿಕೆಶಿ ಅವರ ಸ್ಕೂಲ್ ಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪ್ಟಟಂತೆ ಡಿಕೆಶಿ ಅವರ ಬಳಿ ಮಾತನಾಡಿದ್ದರು ಎನ್ನಲಾಗಿದೆ. ಅಲ್ಲದೇ ದರ್ಶನ್ ಅವರ ಬೇಲ್ ಹಾಗೂ ಮನೆಯೂಟದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿತ್ತು. ಆದರೆ ಬಳಿಕ ಪ್ರತಿಕ್ರಿಯಿಸಿದ ಡಿಕೆಶಿ ದರ್ಶನ್ ಬಗ್ಗೆ ನನ್ನ ಬಳಿ ಅವರು ಮಾತನಾಡಿಲ್ಲ. ಮಗನ ಸ್ಕೂಲ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಪ್ರಕರಣದ ತನಿಖೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದಿದ್ದರು. ಅದರ ಬೆನ್ನಲ್ಲೇ ಇಂದು ವಿಜಿ ದರ್ಶನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ದರ್ಶನ್ ಪ್ರಕರಣದ ತನಿಖೆ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದ ಡಿಸಿಎಂ ಡಿ ಕೆ ಶಿವಕುಮಾರ್

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ  ಹಾಗೂ ಅವರ ಸಹೋದರ ದಿನಕರ್ ತೂಗುದೀಪ್ ಅವರು ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಈ ಭೇಟಿ ಭಾರೀ ಮೂಡಿಸಿತು. ನಿನ್ನೆ ರಾಮನಗರದಲ್ಲಿ ದರ್ಶನ್ ಅವರಿಗೆ ಈ ಕೊಲೆ ಪ್ರಕರಣದಲ್ಲಿ ಅನ್ಯಾಯ ಆಗಿದ್ರೆ ನ್ಯಾಯ ಕೊಡಿಸುವ ಪ್ರಯತ್ನ ಮಾಡ್ತೀನಿ ಅಂತಾ ಡಿಕೆಶಿ ಹೇಳಿದ ಬೆನ್ನಲ್ಲೇ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ  ಹಾಗೂ ಅವರ ಸಹೋದರ ದಿನಕರ್ ತೂಗುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದು ಕುತೂಹಲ ಮೂಡಿಸಿತ್ತು.ದರ್ಶನ್ ವಿಚಾರ ಮಾತನಾಡೋದಕ್ಕೇನೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ  ಹಾಗೂ ಅವರ ಸಹೋದರ ದಿನಕರ್ ತೂಗುದೀಪ್ ಡಿಕೆಶಿ ಮನೆಗೆ ಬಂದಿದ್ದಾರೆ ಎನ್ನಲಾಗಿತ್ತು.ಆದರೆ ಇದೀಗ ಈ ಬಗ್ಗೆ ಡಿಸಿ ಎಂ ಡಿ ಕೆ ಶಿವಕುಮಾರ್ ಅವರೇ ಕ್ಲ್ಯಾರಿಟಿ ಕೊಟ್ಟಿದ್ದಾರೆ.

ಹೌದು… ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ  ಹಾಗೂ ಅವರ ಸಹೋದರ ದಿನಕರ್ ತೂಗುದೀಪ್ ಅವರು ಯಾವ ಕಾರಣಕ್ಕೆ ನಮ್ಮ ಮನೆಗೆ ಬಂದಿದ್ರು ಅನ್ನೋದನ್ನು ಡಿಕೆಶಿ ಹೇಳಿದ್ದಾರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಪುತ್ರ ವಿನೀಶ್ ದರ್ಶನ್ ನ ಶಾಲೆಯ ಸೇರ್ಪಡೆ ಬಗ್ಗೆ ಚರ್ಚೆ ಮಾಡೋದಕ್ಕಾಗಿ ನಮ್ಮ ಮನೆಗೆ ಬಂದಿದ್ದರು. ಅವರ ಮಗ ವಿನೀಶ್ ನನ್ನು ನಮ್ಮ ಶಾಲೆಗೆ ಸೇರಿಸುವ ಬಗ್ಗೆ ಚರ್ಚೆ ಮಾಡುವುದಕ್ಕಾಗಿ ಅವರು ನಮ್ಮ ಮನೆಗೆ ಬಂದು ನನ್ನ ಜೊತೆ ಚರ್ಚೆ ನಡೆಸಿದ್ದಾರೆ. ಕೇವಲ ಇದೇ ವಿಚಾರವನ್ನು ಅಷ್ಟೇ ಅವರು ಮಾತನಾಡಿದ್ದಾರೆ. ಅದರ ಹೊರತಾಗಿ ದರ್ಶನ್ ವಿತಾರವನ್ನಾಗಲಿ ಇಲ್ಲಾ ಬೇರೆ ವಿಚಾರವನ್ನಾಗಲಿ ಅವರು ಮಾತನಾಡಿಲ್ಲ ಎಂದಿದ್ದಾರೆ.

ಅದೆಲ್ಲಕ್ಕಿಂತ ಮುಖ್ಯವಾಗಿ ದರ್ಶನ್‌ ಪ್ರಕರಣದ ತನಿಖೆ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಡಿ ಕೆ ಶಿವಕುಮಾರ್ ನಿವಾಸಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಭೇಟಿ

ನಿನ್ನೆ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅರು ವೇದಿಕೆಯಲ್ಲಿದ್ದ  ವೇಳೆ ಅಲ್ಲಿದ್ದ ದರ್ಶನ್ ಅಭಿಮಾನಿಗಳು ಡಿ ಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ರು. ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು ದರ್ಶನ್ ಪತ್ನಿ ನಾಳೆ ನನ್ನನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ. ಅಲ್ಲದೇ ಒಂದು ವೇಳೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಪಡ್ತೀನಿ. ಆದರೆ, ನಾವು ಕಾನೂನನ್ನು ಗೌರವಿಸಬೇಕು ಎಂದಿದ್ದರು.  ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಕೊಡಿಸುವ ಕೆಲಸ ಮಾಡೋಣ. ನೋವು ಉಂಡವರಿಗೆ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದಿದ್ದರು.

ಇದಾದ ಬೆನ್ನಲ್ಲೇ ಇಂದು ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ದರ್ಶನ್‌ ಪ್ರಕರಣದ ಕುರಿತು ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನು ದರ್ಶನ್ ಅವರು ಅರೆಸ್ಟ್ ಆದಾಗಿನಿಂದ ಅವರನ್ನು ಹೊರಗೆ ತರಲು ವಿಜಯಲಕ್ಷ್ಮೀ ಅವರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಈಗಾಗಲೇ ಹಿರಿಯ ವಕೀಲ ಸಿ ವಿ ನಾಗೇಶ್ ಅವರನ್ನು ದರ್ಶನ್ ಪರ ವಕಾಲತ್ತು ವಹಿಸಲು ವಿಜಯಲಕ್ಷ್ಮೀ ನೇಮಿಸಿಕೊಂಡಿದ್ದಾರೆ. ಸದ್ಯ ಡಿಕೆಶಿ ಅವರನ್ನು ಭೇಟಿ ಮಾಡಿರೋದು ಕುತೂಹಲ ಮೂಡಿಸಿದೆ.